AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸರ್ಗ ಸೈಕ್ಲೋನ್ ಎಫೆಕ್ಟ್​: ಕರ್ನಾಟಕದ ಕಡಲತೀರದಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ಭಾರತಕ್ಕೆ ‘ಕೊರೊನಾ’ ಸೋಂಕಿನ ಗಂಡಾಂತರ ಎದುರಾಗಿರುವ ಸಂದರ್ಭದಲ್ಲೇ ಮತ್ತೊಂದು ಆತಂಕ ಶುರುವಾಗಿದೆ. ಇತ್ತೀಚೆಗಷ್ಟೇ ಬಂಗಾಳಕೊಲ್ಲಿಯಲ್ಲಿ ‘ಅಂಫಾನ್’ ಆರ್ಭಟಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಪೂರ್ವ ಕರಾವಳಿಯಲ್ಲಿ ಅಂಫಾನ್ ಅಬ್ಬರಕ್ಕೆ ನೂರಾರು ಜನ ಬಲಿಯಾಗಿದ್ದರು. ಈಗ ಭಾರತದ ಪಶ್ಚಿಮ ಕರಾವಳಿಗೂ ರಾಕ್ಷಸ ಸುಳಿಯೊಂದು ಅಪ್ಪಳಿಸಲು ಸಿದ್ಧವಾಗಿದ್ದು, ಮಹಾನಗರಿ ಮುಂಬೈ ಗಢಗಢ ನಡುತ್ತಿದೆ. ಭಾರತಕ್ಕೆ ಈ ವರ್ಷ ಸುಳಿಗಾಳಿಗಳ ಸಂಕಷ್ಟ ಎದುರಾದಂತೆ ಕಾಣ್ತಿದೆ. ಅಗತ್ಯವಿದ್ದಾಗ ಮಳೆ ಬೀಳದೆ, ವರುಣನ ಅವಕೃಪೆಗೆ ಒಳಗಾಗೋ ಭಾರತದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿರಲಿದೆ ಅಂತಾ […]

ನಿಸರ್ಗ ಸೈಕ್ಲೋನ್ ಎಫೆಕ್ಟ್​: ಕರ್ನಾಟಕದ ಕಡಲತೀರದಲ್ಲಿ ಆರೆಂಜ್ ಅಲರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 10:59 AM

Share

ಬೆಂಗಳೂರು: ಭಾರತಕ್ಕೆ ‘ಕೊರೊನಾ’ ಸೋಂಕಿನ ಗಂಡಾಂತರ ಎದುರಾಗಿರುವ ಸಂದರ್ಭದಲ್ಲೇ ಮತ್ತೊಂದು ಆತಂಕ ಶುರುವಾಗಿದೆ. ಇತ್ತೀಚೆಗಷ್ಟೇ ಬಂಗಾಳಕೊಲ್ಲಿಯಲ್ಲಿ ‘ಅಂಫಾನ್’ ಆರ್ಭಟಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಪೂರ್ವ ಕರಾವಳಿಯಲ್ಲಿ ಅಂಫಾನ್ ಅಬ್ಬರಕ್ಕೆ ನೂರಾರು ಜನ ಬಲಿಯಾಗಿದ್ದರು. ಈಗ ಭಾರತದ ಪಶ್ಚಿಮ ಕರಾವಳಿಗೂ ರಾಕ್ಷಸ ಸುಳಿಯೊಂದು ಅಪ್ಪಳಿಸಲು ಸಿದ್ಧವಾಗಿದ್ದು, ಮಹಾನಗರಿ ಮುಂಬೈ ಗಢಗಢ ನಡುತ್ತಿದೆ.

ಭಾರತಕ್ಕೆ ಈ ವರ್ಷ ಸುಳಿಗಾಳಿಗಳ ಸಂಕಷ್ಟ ಎದುರಾದಂತೆ ಕಾಣ್ತಿದೆ. ಅಗತ್ಯವಿದ್ದಾಗ ಮಳೆ ಬೀಳದೆ, ವರುಣನ ಅವಕೃಪೆಗೆ ಒಳಗಾಗೋ ಭಾರತದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿರಲಿದೆ ಅಂತಾ ಹೇಳಲಾಗುತ್ತಿದೆ. ಆದ್ರೆ ಮಳೆ ವಿಪರೀತ ಬಿದ್ರೆ ಅದರ ಆಟಾಟೋಪವೇ ಬೇರೆ ಇರುತ್ತೆ. ಕಳೆದ ವರ್ಷವೂ ಇದೇ ನಡೆದಿತ್ತು, ವಿಪರೀತ ಮಳೆ ಹಾಗೂ ಪ್ರವಾಹದಿಂದ ಕರ್ನಾಟಕ ಸೇರಿದಂತೆ ಭಾರತದ ಪೂರ್ವ ಕರಾವಳಿಯ ಬಹುತೇಕ ರಾಜ್ಯಗಳು ಬೆಚ್ಚಿಬಿದ್ದಿದ್ದವು. ಈಗ ಕೂಡ ಅದೇ ಸೀನ್ ರಿಪೀಟ್ ಆಗೋ ಸಾಧ್ಯತೆ ದಟ್ಟವಾಗಿದೆ.

ಮಹಾರಾಷ್ಟ್ರ, ಗುಜರಾತ್‌ ಕಡಲತೀರದಲ್ಲಿ ಭಾರಿ ಕಟ್ಟೆಚ್ಚರ..! ಹೌದು ಅರಬ್ಬಿ ಸಮುದ್ರದಲ್ಲಿ ಮತ್ತೊಂದು ಸೈಕ್ಲೋನ್ ಜನ್ಮತಾಳಿದೆ. ಪೂರ್ವ ಕರಾವಳಿಗೆ ಹೋಲಿಕೆ ಮಾಡಿದ್ರೆ ಪಶ್ಚಿಮದಲ್ಲಿ ಸೈಕ್ಲೋನ್​ಗಳ ಅಬ್ಬರ ಕಡಿಮೆ. ಆದ್ರೆ ಈ ಬಾರಿ ಅದೇನು ಗ್ರಹಚಾರವೋ ಏನೋ, ಮುಂಗಾರು ಆರಂಭ ಆಗುವ ಮೊದಲೇ ಸೈಕ್ಲೋನ್ ಬಂದಪ್ಪಳಿಸಲು ಸಿದ್ಧವಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಗೋವಾ ಕಡಲತೀರಗಳಲ್ಲಿ ಆರೇಂಜ್ ಆಲರ್ಟ್ ನೀಡಲಾಗಿದೆ. ಇಂದು ‘ನಿಸರ್ಗ’ ಸೈಕ್ಲೋನ್ ಮಹಾರಾಷ್ಟ್ರ ಹಾಗೂ ಗುಜರಾತ್‌ ಕಡಲತೀರಕ್ಕೆ ಅಪ್ಪಳಿಸಲಿದ್ದು, ಭಾರಿ ಪ್ರಮಾಣದ ಮಳೆಯಾಗಲಿದೆ. ಇನ್ನೂ ನಿಸರ್ಗ ಎಫೆಕ್ಟ್​ನ ಅಂಕಿ, ಅಂಶವನ್ನ ನೋಡೋದಾದ್ರೆ.

‘ಸೈಕ್ಲೋನ್’ ಸಂಕಷ್ಟ..! ಅರಬ್ಬಿ ಸಮುದ್ರದಲ್ಲಿ ರೂಪ ತಳೆದಿರುವ ನಿಸರ್ಗ ಚಂಡಮಾರುತ ಆರಂಭದಲ್ಲಿ ಗಂಟೆಗೆ 115 ಕಿಲೋ ಮೀಟರ್ ವೇಗದಲ್ಲಿತ್ತು. ಆದ್ರೆ ನಾಳೆಯ ವೇಳೆಗೆಲ್ಲ 125 ಕಿಲೋ ಮೀಟರ್ ವೇಗದಲ್ಲಿ ಮುನ್ನುಗ್ಗಲಿದೆ ಎನ್ನಲಾಗುತ್ತಿದೆ. ಹಾಗೇ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ನಿಸರ್ಗ ಸೈಕ್ಲೋನ್ ಎಫೆಕ್ಟ್​ನಿಂದ ವರುಣ ಅಬ್ಬರಿಸಲಿದ್ದಾನೆ. ಈಗಾಗಲೇ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಿದೆ.

ಕಳೆದ ಬಾರಿ ನೆರೆಯಿಂದ ತತ್ತರಿಸಿದ್ದ ದೇವರ ನಾಡು ಕೇರಳಕ್ಕೂ ನಿಸರ್ಗಾ ಭಯ ಕಾಡುತ್ತಿದೆ. ಸೈಕ್ಲೋನ್ ಅಪ್ಪಳಿಸುವುದನ್ನ ಅರಿತು ಅಲರ್ಟ್ ಆದ ಕೇಂದ್ರ ಸರ್ಕಾರ ಅಪಾಯವಿರುವ ರಾಜ್ಯಗಳಿಗೆ ಎನ್​ಡಿಆರ್​ಎಫ್ ತಂಡಗಳನ್ನ ರವಾನಿಸಿದೆ. ಹಾಗೇ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನೂ ನೀಡಲಾಗಿದೆ.

ಒಟ್ನಲ್ಲಿ ಇಂದು ಹಾಗೂ ನಾಳೆ ಭಾರಿ ಪ್ರಮಾಣದ ಮಳೆಯಾಗಲಿದ್ದು, ಪರಿಸ್ಥಿತಿ ಎದುರಿಸಲು ಸಿದ್ಧವಾಗಬೇಕಿದೆ. ನಿಸರ್ಗ ಸೈಕ್ಲೋನ್ ಅಬ್ಬರದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಹನಿಗಳ ಸಿಂಚನವಾಗಲಿದೆ. ನೀವು ಹೊರಗೆ ಓಡಾಡೋರಾಗಿದ್ರೆ ಯಾವುದಕ್ಕೂ ಒಂದು ಕೊಡೆಯನ್ನ ಜೊತೆಯಲ್ಲೇ ಇಟ್ಕೊಂಡಿರಿ. ಹಾಗೇ ಮಳೆ ಬರುವಾಗ ಮರಗಳ ಬಳಿ ಸುಳಿಯದೇ ಇರೋದು ಒಳ್ಳೆಯದು.

Published On - 8:23 am, Tue, 2 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ