AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tauktae relief fund: ತೌಕ್ತೆ ಚಂಡಮಾರುತದಿಂದ ಮನೆ ಕುಸಿದರೆ 5 ಲಕ್ಷ, ಬೋಟ್ ದುರಂತದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Karnataka Cyclone Tauktae relief fund: ಚಂಡಮಾರುತದಿಂದ ತೊಂದರೆಗೊಳಗಾದ 182 ಕುಟುಂಬಗಳಿಗೆ ತಲಾ 10,000 ರೂಪಾಯಿ ಪರಿಹಾರ ಮನೆಗಳಿಗೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

Cyclone Tauktae relief fund: ತೌಕ್ತೆ ಚಂಡಮಾರುತದಿಂದ ಮನೆ ಕುಸಿದರೆ 5 ಲಕ್ಷ, ಬೋಟ್ ದುರಂತದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಆರ್.ಅಶೋಕ್
guruganesh bhat
|

Updated on:May 17, 2021 | 5:16 PM

Share

ಮಂಗಳೂರು: ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಚಂಡಮಾರುತದಿಂದ ಮನೆ ಸಂಪೂರ್ಣ ಕುಸಿದು ಬಿದ್ದಿದ್ದರೆ 5 ಲಕ್ಷ ಪರಿಹಾರ, ಭಾಗಶಃ ಹಾನಿಯಾಗಿದ್ದರೆ 1 ಲಕ್ಷ ಪರಿಹಾರ, ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಒದಗಿಸುವುದಾಗಿ ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದ್ದಾರೆ. ಜತೆಗೆ ಚಂಡಮಾರುತದಿಂದ ತೊಂದರೆಗೊಳಗಾದ 182 ಕುಟುಂಬಗಳಿಗೆ ತಲಾ 10,000 ರೂಪಾಯಿ ಪರಿಹಾರ ಮನೆಗಳಿಗೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತದಿಂದ ರಾಜ್ಯದಲ್ಲಿ ಈವರೆಗೆ 6 ಜನ ಮೃತಪಟ್ಟಿದ್ದಾರೆ. 22 ತಾಲೂಕುಗಳಲ್ಲಿ 57 ಗುಡಿಸಲು, 333 ಮನೆಗಳಿಗೆ ಹಾನಿಯಾಗಿದೆ. 30 ಹೆಕ್ಟೇರ್​ ಕೃಷಿ ಬೆಳೆ, 2.87 ಹೆಕ್ಟೇರ್ ತೋಟಗಾರಿಕಾ ಬೆಳೆ, 57 ಕಿ.ಮೀ ರಸ್ತೆಗೆ ಹಾನಿ ಉಂಟಾಗಿದೆ. 644 ವಿದ್ಯುತ್ ಕಂಬ, 147 ಟ್ರಾನ್ಸ್​ಫಾರ್ಮಾರ್, 104 ಬೋಟ್​ಗಳಿಗೆ ತೌಕ್ತೆಯ ಅಬ್ಬರದಿಂದ ಹಾನಿಗೊಳಗಾಗಿವೆ ಎಂದು ರಾಜ್ಯ ಪ್ರಕೃತಿ ವಿಕೋಪ ವಿಪತ್ತು ನಿರ್ವಹಣಾ ಸಂಸ್ಥೆ ಸರ್ಕಾಕ್ಕೆ ವರದಿ ಸಲ್ಲಿಸಿದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿಯ ವರದಿ ಸಲ್ಲಿಸಿದ ರಾಜ್ಯ ಪ್ರಕೃತಿ ವಿಕೋಪ ವಿಪತ್ತು ನಿರ್ವಹಣಾ ಸಂಸ್ಥೆ, ಚಂಡಮಾರುತದಿಂದ ಹಾನಿಗೊಳಗಾದ 547 ಜನರನ್ನು ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 13 ನೆರೆ ಪರಿಹಾರ ಕೇಂದ್ರಗಳಲ್ಲಿ 290 ಜನರಿಗೆ ಆಶ್ರಯ ಒದಗಿಸಲಾಗಿದೆ ಎಂದು ತಿಳಿಸಿದೆ.

ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾನಿ ಪರಿಶೀಲನೆಗೆ ಮಂಗಳೂರಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿದರು. ಜತೆಗೆ ಅವರು ಎನ್​ಎಂಪಿಟಿ ಕಚೇರಿಯಲ್ಲಿ ಸಮುದ್ರದಲ್ಲಿ ಸಿಕ್ಕಿಬಿದ್ದಿದ್ದ ರಕ್ಷಣೆಯಾದ ಕಾರ್ಮಿಕರ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದರು. ಸಂಜೆಯ ವೇಳೆಗೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯದ ಕೊವಿಡ್‌ ಸ್ಥಿತಿಗತಿ ಬಗ್ಗೆ ಎಚ್​.ಡಿ.ಕುಮಾರಸ್ವಾಮಿ ಆನ್‌ಲೈನ್‌ ಸಮಾಲೋಚನೆ; 2ಡಿಜಿ ಔ‍ಷಧ ಜೆಡಿಎಸ್‌ನಿಂದ ಉಚಿತವಾಗಿ ಹಂಚಲು ಚಿಂತನೆ

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ

(Cyclone Tauktae relief fund announced by Karnataka State government Rs 5 lakh for home collapse 10 lakh for Mangaluru boat died family)

Published On - 4:57 pm, Mon, 17 May 21

Follow Us
guruganesh bhat
guruganesh bhat
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ