AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

cyclone tauktae ಕೇರಳದಲ್ಲಿ ಇಬ್ಬರು ಬಲಿ, ಮುಂಬೈನಲ್ಲಿ ಆಸ್ಪತ್ರೆಯಿಂದ 580 ಕೊರೊನಾ ಸೋಂಕಿತರ ಸ್ಥಳಾಂತರ

ತೌಕ್ತೆ ಚಂಡಮಾರುತದ ಮುನ್ನೆಚ್ಚರಿಕಾ ಕ್ರಮವಾಗಿ ಜಂಬೊ ಕೇಂದ್ರಗಳಿಂದ 580 ಕೊರೊನಾ ಸೋಂಕಿತರನ್ನು ಸುರಕ್ಷಿತ ವಿವಿಧ ಆಸ್ಪತ್ರೆಗಳಿಗೆ ವರ್ಗಾಯಿಸಿರುವುದಾಗಿ ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ತಿಳಿಸಿದೆ.

cyclone tauktae ಕೇರಳದಲ್ಲಿ ಇಬ್ಬರು ಬಲಿ, ಮುಂಬೈನಲ್ಲಿ ಆಸ್ಪತ್ರೆಯಿಂದ 580 ಕೊರೊನಾ ಸೋಂಕಿತರ ಸ್ಥಳಾಂತರ
ತೌಕ್ತೆ ಚಂಡಮಾರುತ
ಆಯೇಷಾ ಬಾನು
|

Updated on:May 16, 2021 | 11:58 AM

Share

ಕೊಚ್ಚಿ: ತೌಕ್ತೆ ಚಂಡಮಾರುತ ಕರಾವಳಿಯಿಂದ ಉತ್ತರದ ಕಡೆಗೆ ಹೊರಟಿದ್ದು ಭೀಕರ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಕೇರಳದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ತೌಕ್ತೆ ಚಂಡಮಾರುತದ ಪ್ರಭಾವ ಭೀಕರವಾಗಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವಿಸಿದ್ದು ಅನೇಕ ಅನಾಹುತಗಳಾಗಿವೆ. ಕಂದಾಯ ಇಲಾಖೆ ಪ್ರಕಾರ 38 ಮನೆಗಳಿಗೆ ಹಾನಿಯಾಗಿದ್ದು ಅನೇಕ ತಗ್ಗು ಪ್ರದೇಶಗಳು, ರಸ್ತೆಗಳು ಮುಳುಗಿವೆ. ಮರಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ನೆಲಕಚ್ಚಿವೆ.

ಎರ್ನಾಕುಲಂ ಮತ್ತು ಕೋಜಿಕೋಡೆಯಲ್ಲಿ ಭಾರಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ವೈನಾಡ್, ಕೋಜಿಕೋಡೆ, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ಒಂಬತ್ತು ಜಿಲ್ಲೆಗಳು ರೆಡ್ ಅಲರ್ಟ್ನಲ್ಲಿವೆ. ಇಂದೂ ಕೂಡ ಭಾರಿ ಮಳೆ ಸಂಭವಿಸಲಿದೆ. ಆದರೆ ಐಎಂಡಿ ಎಲ್ಲಾ ರೆಡ್ ಅಲರ್ಡ್ ಎಚ್ಚರಿಕೆಯನ್ನು ಹಿಂತೆದುಕೊಂಡಿದೆ. ಮತ್ತು ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂಗಳಲ್ಲಿ ಮಾತ್ರ ಆರೆಂಟ್ ಅಲರ್ಟ್ ಘೋಷಿಸಲಾಗಿದೆ. 2094 ಜನರಿಗೆ 71 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಕೇರಳಾ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತದ ಪ್ರಭಾವದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗಿದ್ದು ಅನೇಕ ಮನೆಗಳು ಜಲಾವೃತವಾಗಿವೆ. ಇನ್ನು ಚಂಡಮಾರುತ ಮತ್ತಷ್ಟು ತೀವ್ರಗೊಳ್ಳಲಿದ್ದು ಮೇ 18ರ ಬೆಳಗ್ಗೆ ಗುಜರಾತ್ ಕರಾವಳಿಯನ್ನು ತಲುಪಲಿದೆ.

ತೌಕ್ತೆ ಚಂಡಮಾರುತದಿಂದಾಗಿ, ಕಳೆದ 24 ಗಂಟೆಗಳಲ್ಲಿ 3 ಕರಾವಳಿ ಜಿಲ್ಲೆಗಳು ಮತ್ತು 3 ಮಲ್ನಾಡ್ ಜಿಲ್ಲೆಗಳು ಸೇರಿದಂತೆ 6 ಜಿಲ್ಲೆಗಳಲ್ಲಿ ಸಂಭವಿಸಿದ ಭಾರಿ ಮಳೆಗೆ ಈವರೆಗೆ 4 ಜನರು ಪ್ರಾಣ ಕಳೆದುಕೊಂಡಿದ್ದಾರೆ. 73 ಗ್ರಾಮಗಳು ಪ್ರಭಾವಕ್ಕೆ ಒಳಗಾಗಿವೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ತಿಳಿಸಿದೆ.

ಗುಜರಾತ್ ಕರಾವಳಿಯತ್ತ ಚಂಡಮಾರುತ ಗುಜರಾತ್ ಕರಾವಳಿಯಲ್ಲಿ ಮೇ 18ರ ಮಂಗಳವಾರ ಮುಂಜಾನೆ 150 ಕಿ.ಮೀ ವೇಗದಲ್ಲಿ ಭೂಕುಸಿತ ಸಂಭವಿಸುವ ಮುನ್ಸೂಚನೆ ಇದೆ. ಭವನಗರ ಜಿಲ್ಲೆಯ ಪೊರ್ಬಂದರ್ ಮತ್ತು ಮಾಹುವಾ ನಡುವೆ ಚಂಡಮಾರುತದ ಹಾದು ಹೋಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಗುಜರಾತ್ ಸೇರಿದಂತೆ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ದಿನಕ್ಕೆ 100 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗಲಿದೆ. ಚಂಡಮಾರುತವು ದೂರ ಹೋದ ನಂತರವೂ, ದಕ್ಷಿಣ ಭಾರತವು ಕಡಲತೀರದ ಗಾಳಿಯಿಂದಾಗಿ ಮುಂದಿನ ಐದು ದಿನಗಳಲ್ಲಿ ನಿರಂತರವಾಗಿ 20 ಮಿ.ಮೀ ಗಿಂತ ಹೆಚ್ಚು ಮಳೆಯಾಗಲಿದೆ.

580 ಕೊವಿಡ್ ಸೋಂಕಿತ ಸ್ಥಳಾಂತರ ಇನ್ನು ತೌಕ್ತೆ ಚಂಡಮಾರುತದ ಮುನ್ನೆಚ್ಚರಿಕಾ ಕ್ರಮವಾಗಿ ಜಂಬೊ ಕೇಂದ್ರಗಳಿಂದ 580 ಕೊರೊನಾ ಸೋಂಕಿತರನ್ನು ಸುರಕ್ಷಿತ ವಿವಿಧ ಆಸ್ಪತ್ರೆಗಳಿಗೆ ವರ್ಗಾಯಿಸಿರುವುದಾಗಿ ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ತಿಳಿಸಿದೆ.

ಇದನ್ನೂ ಓದಿ: Cyclone Tauktae ಮೇ 18ರಂದು ಗುಜರಾತ್ ಕರಾವಳಿ ದಾಟಲಿದೆ ತೌಕ್ತೆ ಚಂಡಮಾರುತ

Published On - 11:56 am, Sun, 16 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!