AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

Monsoon in Karnataka: ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ನಾಲ್ಕು ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ಸಾಧು ಶ್ರೀನಾಥ್​
|

Updated on:May 24, 2021 | 10:47 AM

Share

ಪ್ರತಿ ವರ್ಷದಂತೆ ಕೇರಳದ ಕಡೆಯಿಂದ ನೈಋತ್ಯ ಮುಂಗಾರು ಮಳೆ ಜೂನ್​ 1 ಮೊದಲ ವಾರದಲ್ಲಿ ಕರ್ನಾಟಕ ಪ್ರವೇಶಿಸಲಿದೆ ಎಂದು ಈ ಮುಂಚೆ ಅಂದಾಜಿಸಲಾಗಿತ್ತು. ಆದರೆ ಈ ಮಧ್ಯೆ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ದಾಳಿಯ ಪರಿಣಾಮ ನಾಲ್ಕು ದಿನ ಮುಂಚೆಯೇ, ಮೇ ತಿಂಗಳಾಂತ್ಯಕ್ಕೆ ಕರ್ನಾಟಕದಲ್ಲಿ ಮುಂಗಾರು ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ಈಗ ಹೇಳುತ್ತಿವೆ.

ಕೇರಳದಲ್ಲಿ ಜೂನ್​ 1ಕ್ಕೆ ನೈಋತ್ಯ ಮುಂಗಾರು ಪ್ರವೇಶ ಪಡೆದರೆ ಜೂನ್​ 3-4ರಂದು ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre -KSNDMC) ಹೇಳಿದೆ. ಇದೀಗ ಯಾಸ್​ ಚಂಡ ಮಾರುತದಿಂದಾಗಿ ಮೇ 31ಕ್ಕೆ ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ.

KSNDMC ಕೇಂದ್ರದ ಕಿರಿಯ ವಿಜ್ಞಾನಿ ಎಸ್​ ಎಸ್​ ಎಂ ಗವಾಸ್ಕರ್​ ಅವರು ವಿಶ್ಲೇಷಿಸುವಂತೆ ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ ತಿಂಗಳಿಂದ ಸೆಪ್ಟೆಂಬರ್​ ವರೆಗೂ ಮಳೆ ಸುರಿಸಲಿದೆ. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಸಾಮಾನ್ಯವಾಗಿ ಮುಂಗಾರು ಕಾಲದಲ್ಲಿ ಗುಡುಗು, ಸಿಡಿಲಿನ ಆರ್ಭಟದ ಮಳೆಯಿರುವುದಿಲ್ಲ. ಆದರೆ ಈಗ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ಹಾವಳಿಯಿಂದ ಅಬ್ಬರದ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್​ ಪಾಟೀಲ್​ (Director of Indian Meteorological Department) ತಿಳಿಸಿದ್ದಾರೆ.

(Cyclone Yaas may effect Southwest monsoon in Karnataka by may 31 four days earlier says Karnataka State Natural Disaster Monitoring Centre)

Cyclone Yaas: ಯಸ್ ಬಂದೇ ಬಿಡ್ತು ಯಾಸ್ ಚಂಡಮಾರುತ! ಏನಿದರ ಏರಿಳಿತಗಳು? ಯಾವಾಗ ಎಲ್ಲಿ ಸೈಕ್ಲೋನ್​ ಮಳೆ ಸುರಿಯಲಿದೆ?

Published On - 10:45 am, Mon, 24 May 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?