AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

Monsoon in Karnataka: ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ನಾಲ್ಕು ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
Follow us
ಸಾಧು ಶ್ರೀನಾಥ್​
|

Updated on:May 24, 2021 | 10:47 AM

ಪ್ರತಿ ವರ್ಷದಂತೆ ಕೇರಳದ ಕಡೆಯಿಂದ ನೈಋತ್ಯ ಮುಂಗಾರು ಮಳೆ ಜೂನ್​ 1 ಮೊದಲ ವಾರದಲ್ಲಿ ಕರ್ನಾಟಕ ಪ್ರವೇಶಿಸಲಿದೆ ಎಂದು ಈ ಮುಂಚೆ ಅಂದಾಜಿಸಲಾಗಿತ್ತು. ಆದರೆ ಈ ಮಧ್ಯೆ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ದಾಳಿಯ ಪರಿಣಾಮ ನಾಲ್ಕು ದಿನ ಮುಂಚೆಯೇ, ಮೇ ತಿಂಗಳಾಂತ್ಯಕ್ಕೆ ಕರ್ನಾಟಕದಲ್ಲಿ ಮುಂಗಾರು ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ಈಗ ಹೇಳುತ್ತಿವೆ.

ಕೇರಳದಲ್ಲಿ ಜೂನ್​ 1ಕ್ಕೆ ನೈಋತ್ಯ ಮುಂಗಾರು ಪ್ರವೇಶ ಪಡೆದರೆ ಜೂನ್​ 3-4ರಂದು ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre -KSNDMC) ಹೇಳಿದೆ. ಇದೀಗ ಯಾಸ್​ ಚಂಡ ಮಾರುತದಿಂದಾಗಿ ಮೇ 31ಕ್ಕೆ ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ.

KSNDMC ಕೇಂದ್ರದ ಕಿರಿಯ ವಿಜ್ಞಾನಿ ಎಸ್​ ಎಸ್​ ಎಂ ಗವಾಸ್ಕರ್​ ಅವರು ವಿಶ್ಲೇಷಿಸುವಂತೆ ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ ತಿಂಗಳಿಂದ ಸೆಪ್ಟೆಂಬರ್​ ವರೆಗೂ ಮಳೆ ಸುರಿಸಲಿದೆ. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಸಾಮಾನ್ಯವಾಗಿ ಮುಂಗಾರು ಕಾಲದಲ್ಲಿ ಗುಡುಗು, ಸಿಡಿಲಿನ ಆರ್ಭಟದ ಮಳೆಯಿರುವುದಿಲ್ಲ. ಆದರೆ ಈಗ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ಹಾವಳಿಯಿಂದ ಅಬ್ಬರದ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್​ ಪಾಟೀಲ್​ (Director of Indian Meteorological Department) ತಿಳಿಸಿದ್ದಾರೆ.

(Cyclone Yaas may effect Southwest monsoon in Karnataka by may 31 four days earlier says Karnataka State Natural Disaster Monitoring Centre)

Cyclone Yaas: ಯಸ್ ಬಂದೇ ಬಿಡ್ತು ಯಾಸ್ ಚಂಡಮಾರುತ! ಏನಿದರ ಏರಿಳಿತಗಳು? ಯಾವಾಗ ಎಲ್ಲಿ ಸೈಕ್ಲೋನ್​ ಮಳೆ ಸುರಿಯಲಿದೆ?

Published On - 10:45 am, Mon, 24 May 21

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ