AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

Monsoon in Karnataka: ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ನಾಲ್ಕು ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?
ಸಾಧು ಶ್ರೀನಾಥ್​
|

Updated on:May 24, 2021 | 10:47 AM

Share

ಪ್ರತಿ ವರ್ಷದಂತೆ ಕೇರಳದ ಕಡೆಯಿಂದ ನೈಋತ್ಯ ಮುಂಗಾರು ಮಳೆ ಜೂನ್​ 1 ಮೊದಲ ವಾರದಲ್ಲಿ ಕರ್ನಾಟಕ ಪ್ರವೇಶಿಸಲಿದೆ ಎಂದು ಈ ಮುಂಚೆ ಅಂದಾಜಿಸಲಾಗಿತ್ತು. ಆದರೆ ಈ ಮಧ್ಯೆ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ದಾಳಿಯ ಪರಿಣಾಮ ನಾಲ್ಕು ದಿನ ಮುಂಚೆಯೇ, ಮೇ ತಿಂಗಳಾಂತ್ಯಕ್ಕೆ ಕರ್ನಾಟಕದಲ್ಲಿ ಮುಂಗಾರು ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ಈಗ ಹೇಳುತ್ತಿವೆ.

ಕೇರಳದಲ್ಲಿ ಜೂನ್​ 1ಕ್ಕೆ ನೈಋತ್ಯ ಮುಂಗಾರು ಪ್ರವೇಶ ಪಡೆದರೆ ಜೂನ್​ 3-4ರಂದು ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre -KSNDMC) ಹೇಳಿದೆ. ಇದೀಗ ಯಾಸ್​ ಚಂಡ ಮಾರುತದಿಂದಾಗಿ ಮೇ 31ಕ್ಕೆ ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ.

KSNDMC ಕೇಂದ್ರದ ಕಿರಿಯ ವಿಜ್ಞಾನಿ ಎಸ್​ ಎಸ್​ ಎಂ ಗವಾಸ್ಕರ್​ ಅವರು ವಿಶ್ಲೇಷಿಸುವಂತೆ ಮುಂಗಾರು ಪ್ರವೇಶಿಸಿದ ಬಳಿಕವಷ್ಟೇ ಅದರ ಮೊದಲ ಹೊಡೆತ ನೋಡಿಕೊಂಡು ಮುಂದೆ ರಾಜ್ಯದಲ್ಲಿ ಮುಂಗಾರು ಯಾವ ಪ್ರಮಾಣದಲ್ಲಿ ಮಳೆ ಸುರಿಸಲಿದೆ ಎಂದು ಲೆಕ್ಕಾಚಾರ ಹಾಕಬಹುದು. ಅಲ್ಲಿಯವರೆಗೂ ನಿಖರವಾಗಿ ಏನೂ ಹೇಳಲಾಗದು. ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ ತಿಂಗಳಿಂದ ಸೆಪ್ಟೆಂಬರ್​ ವರೆಗೂ ಮಳೆ ಸುರಿಸಲಿದೆ. ವಾಡಿಕೆಯಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚಾಗಿಯೇ ಈ ಬಾರಿ ಮುಂಗಾರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಸಾಮಾನ್ಯವಾಗಿ ಮುಂಗಾರು ಕಾಲದಲ್ಲಿ ಗುಡುಗು, ಸಿಡಿಲಿನ ಆರ್ಭಟದ ಮಳೆಯಿರುವುದಿಲ್ಲ. ಆದರೆ ಈಗ ತೌತೆ ಮತ್ತು ತದನಂತರ ಯಾಸ್​ ಚಂಡಮಾರುತಗಳ ಹಾವಳಿಯಿಂದ ಅಬ್ಬರದ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್​ ಪಾಟೀಲ್​ (Director of Indian Meteorological Department) ತಿಳಿಸಿದ್ದಾರೆ.

(Cyclone Yaas may effect Southwest monsoon in Karnataka by may 31 four days earlier says Karnataka State Natural Disaster Monitoring Centre)

Cyclone Yaas: ಯಸ್ ಬಂದೇ ಬಿಡ್ತು ಯಾಸ್ ಚಂಡಮಾರುತ! ಏನಿದರ ಏರಿಳಿತಗಳು? ಯಾವಾಗ ಎಲ್ಲಿ ಸೈಕ್ಲೋನ್​ ಮಳೆ ಸುರಿಯಲಿದೆ?

Published On - 10:45 am, Mon, 24 May 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು