AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ತಿರುಗೇಟು

ಬೆಂಗಳೂರಲ್ಲಿ ರಸ್ತೆ ಗುಂಡಿ ಮತ್ತು ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ಪೋಸ್ಟ್​ಗೆ, ರಸ್ತೆ ದುರಸ್ತಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಡಿಸಿಎಂ ಡಿಕೆಶಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಸವಾಲುಗಳಿದ್ದು, ಈಗಾಗಲೇ ಅದರತ್ತ ನಾವು ಗಮನಹರಿಸಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.

ಉದ್ಯಮಿ ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ತಿರುಗೇಟು
ಡಿಸಿಎಂ ಡಿಕೆಶಿ ತಿರುಗೇಟು
ಪ್ರಸನ್ನ ಹೆಗಡೆ
|

Updated on: Oct 14, 2025 | 5:57 PM

Share

ಬೆಂಗಳೂರು, ಅಕ್ಟೋಬರ್ 14: ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ​ ಪೋಸ್ಟ್​ ವಿಚಾರಕ್ಕೆ ‘ಎಕ್ಸ್’​ ಖಾತೆ ಮೂಲಕವೇ ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಸವಾಲುಗಳಿದ್ದು, ಈಗಾಗಲೇ ಅದರತ್ತ ನಾವು ಗಮನಹರಿಸಿದ್ದೇವೆ. ರಸ್ತೆ ದುರಸ್ತಿಗೆ ಈಗಾಗಲೇ 1,100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ನಗರದಲ್ಲಿ 10 ಸಾವಿರ ರಸ್ತೆ ಗುಂಡಿಗಳನ್ನು ಗುರುತಿಸಿದ್ದು, ಆ ಪೈಕಿ ಅದರಲ್ಲಿ 5 ಸಾವಿರ ಗುಂಡಿಗಳನ್ನು ಮುಚ್ಚಿದ್ದೇವೆ. ಮಹತ್ವದ ಯೋಜನೆಯ ಕೆಲಸ ಕಾರ್ಯಗಳು ಮುಂದುವರಿದಿದ್ದು, ಬೆಂಗಳೂರು ಪೂರ್ವ ಪಾಲಿಕೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ಈ ಭಾಗದ ಐಟಿ-ಬಿಟಿ ಕಂಪನಿಗಳಿಗೆ ಇದರಿಂದ ಸಹಾಯ ಆಗ್ತಿದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ತಿರುಗೇಟು

ಕಿರಣ್​ ಮಜುಂದಾರ್​ ಶಾ ಪೋಸ್ಟ್​ನಲ್ಲಿ ಏನಿತ್ತು?

ಬಯೋಕಾನ್​ ಪಾರ್ಕ್​ಗೆ ಚೀನಾದಿಂದ ಬಂದಿದ್ದ ಉದ್ಯಮಿಯೊಬ್ಬರು ತಮಗೆ ಕೇಳಿದ್ದ ಪ್ರಶ್ನೆ ಬಗ್ಗೆ ಕಿರಣ್​ ಮಜುಂದಾರ್​ ಶಾ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದರು. ಯಾಕೆ ಬೆಂಗಳೂರು ನಗರದ ರಸ್ತೆಗಳು ಹಾಳಾಗಿವೆ? ಕಂಡ‌ ಕಂಡಲ್ಲಿ‌ ಕಸದ ರಾಶಿ ಯಾಕಿದೆ? ಇಲ್ಲಿನ ಸರ್ಕಾರ ಹೂಡಿಕೆದಾರರಿಗೆ ಬೆಂಬಲ ನೀಡುತ್ತಿಲ್ಲವೇ ಎಂದು ನನ್ನನ್ನು ಚೀನಾ ಉದ್ಯಮಿ ಪ್ರಶ್ನಿಸಿದ್ದಾಗಿ ಅವರು ಹೇಳಿಕೊಂಡಿದ್ದರು. ಅಲ್ಲದೆ ಈ ಪೋಸ್ಟ್​ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಟ್ಯಾಗ್ ಕೂಡ ಮಾಡಿದ್ದರು.

ಕಿರಣ್ ಮಜುಂದಾರ್ ಅವರ ಈ ಪೋಸ್ಟ್​ ವಿಚಾರವಾಗಿ ಐಟಿ ಬಿಟಿ ಸಚಿವ ಪ್ರಿಯಾಂಕ್​ ಖರ್ಗೆ ಈಗಾಗಲೇ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಕಸ ಹಾಕೋರು ಯಾರು? ಮೇಲಿಂದ ಬಂದು ಬೀಳುತ್ತಾ? ಹೀಗಾಗಿ ನಾಗರಿಕರು ತಮ್ಮ ಜವಾಬ್ದಾರಿ ಅರಿತುಕೊಂಡು ಸಹಾಕಾರ ನೀಡಬೇಕು ಎಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?