AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ಕ್ಕೆ ಬೃಹತ್ ಚಳುವಳಿ ನಡೆಸಲಾಗುವುದು : ಡಿ.ಕೆ.ಶಿವಕುಮಾರ್​

ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರವಾಗಿ ನಿಂತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿ ಜನವರಿ 20 ರಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರಾಜ ಭವನದವರೆಗೆ ಪ್ರತಿಭಟನಾ ಪ್ರತಿಭಟನೆ ನಡೆಸುವ ಜೊತೆಗೆ ರಾಜ ಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದರು.

ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ಕ್ಕೆ ಬೃಹತ್ ಚಳುವಳಿ ನಡೆಸಲಾಗುವುದು : ಡಿ.ಕೆ.ಶಿವಕುಮಾರ್​
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
sandhya thejappa
| Edited By: |

Updated on:Jan 14, 2021 | 5:03 PM

Share

ಬೆಂಗಳೂರು: ಕೃಷಿ ಕಾಯ್ದೆಗಳ ವಿರುದ್ಧ ಇಡೀ ದೇಶದ ರೈತರು ವಿದೇಶಗಳು ನೋಡುವ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು, ರಾಜ್ಯದ ರೈತರಿಗೆ ಶಕ್ತಿ ತುಂಬಲು ಜನವರಿ 20 ರಂದು ಚಳವಳಿ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರವಾಗಿ ನಿಂತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ ಜನವರಿ 20 ರಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರಾಜ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಜೊತೆಗೆ ರಾಜ ಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದರು.

ಕೊರೊನಾ ಹಾವಳಿಯಿಂದ ಇಡೀ ವರ್ಷ ಎಲ್ಲಾ ವ್ಯಾಪಾರಸ್ಥರಿಗೆ ತೀರಾ ನಷ್ಟವಾಗಿದೆ. ಈ ನಡುವೆ ಯಾರಿಗೂ ಸಹಾಯ ಆಗದ ರೀತಿಯಲ್ಲಿ ಸರ್ಕಾರ ನಡೆದುಕೊಂಡಿದೆ. ರೈತರು, ವರ್ತಕರ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ತೆರಿಗೆ ಹೆಚ್ಚಳ, ಗ್ಯಾಸ್ ಬೆಲೆ ಹೆಚ್ಚಳ, ವಿದ್ಯುತ್ ಬೆಲೆ ಹೆಚ್ಚಳ, ರೈತರಿಗೆ ಸಬ್ಸಿಡಿ, ಶಾಲೆ ಶುಲ್ಕ, ಸ್ಕಾಲರ್ಶಿಪ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೋರಾಟ ನಡೆಸುತ್ತೇವೆ ಎಂದರು.

ಕಾಂಗ್ರೆಸ್​ ತಯಾರು ಮಾಡಿದ ನಾಯಕರು ನಿಮಗೆ ಶಕ್ತಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪರವರು ಹೇಳಿದ್ದಾರೆ. ಆದರೆ ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ ಎಂದು ಅಭಿಪ್ರಾಯಪಟ್ಟ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದಿದ್ದಾರೆ. ಜೊತೆಗೆ ಅಧಿಕಾರ ಯಡಿಯೂರಪ್ಪರವರದ್ದಾಗಿರಬಹುದು ಆದರೆ ನಿಮಗೆ ಮಾತಾಡುವುದಕ್ಕೆ ಅವಕಾಶ ಕೊಟ್ಟಿರುವುದು ಕಾಂಗ್ರೆಸ್. ನಾವು ತಯಾರು ಮಾಡಿದ ನಾಯಕರು ನಿಮಗೆ ಶಕ್ತಿಯಾಗಿದ್ದಾರೆ. ತಲೆಯಲ್ಲಿ ಭ್ರಮೆ ಇದ್ದರೆ ಅದನ್ನು ತೆಗೆದುಹಾಕಿ. ಸಂಪುಟ ರಚನೆ ಬಗ್ಗೆ ನಿಮ್ಮ ಪಕ್ಷದವರೇ ಬ್ಲಾಕ್ ಮೇಲ್​ ಜನತಾ ಪಾರ್ಟಿ ಎಂದು ಹೇಳಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ವಿರುದ್ಧ ನೇರ ವಾಗ್ದಾಳಿ ಮಾಡಿದ್ದಾರೆ.

ದೇವರು ಇಲ್ಲ ಅನ್ನೋ ಜಾತಿಯಲ್ಲಿ ನಾನು ಹುಟ್ಟಿಲ್ಲ..ದೈವ ನಿರ್ಣಯಕ್ಕೆ ತಲೆಬಾಗುತ್ತೇನೆ ಎಂದ ಮುನಿರತ್ನ

Published On - 5:01 pm, Thu, 14 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!