AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಲಾಕ್​ಡೌನ್ ಭೀತಿ​: ವದಂತಿಗೆ ಬೆದರಿ ಗುಳೆ ಹೊರಟ ಕೂಲಿ ಕಾರ್ಮಿಕರು

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವುದರಿಂದ ಸರ್ಕಾರ ದಿನಕ್ಕೊಂದು ಕಾನೂನು ರೂಪಿಸುತ್ತಿದೆ. ಇನ್ನೊಂದೆಡೆ ಸಾರಿಗೆ ನೌಕರರ ಮುಷ್ಕರವೂ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಬಿಗಡಾಯಿಸಿದರೆ ಲಾಕ್​ಡೌನ್ ಆಗುವುದು ಖಚಿತ ಎಂಬ ವದಂತಿ ಹಬ್ಬಿದೆ.

ಕರ್ನಾಟಕದಲ್ಲಿ ಲಾಕ್​ಡೌನ್ ಭೀತಿ​: ವದಂತಿಗೆ ಬೆದರಿ ಗುಳೆ ಹೊರಟ ಕೂಲಿ ಕಾರ್ಮಿಕರು
ಗುಳೆ ಹೊರಟ ಮಂದಿ (ಸಂಗ್ರಹ ಚಿತ್ರ)
Skanda
| Edited By: ಸಾಧು ಶ್ರೀನಾಥ್​|

Updated on: Apr 08, 2021 | 9:50 AM

Share

ಬೆಂಗಳೂರು: ದೇಶದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣ ಬಹುತೇಕ ಎಲ್ಲಾ ರಾಜ್ಯಗಳು ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿವೆ. ದೆಹಲಿ, ಪುಣೆ ಸೇರಿದಂತೆ ಅನೇಕ ಕಡೆಗಳಲ್ಲಿ ಈಗಾಗಲೇ ನೈಟ್ ಕರ್ಫ್ಯೂ, ವಾರಾಂತ್ಯದ ಲಾಕ್​ಡೌನ್​ನಂತಹ ಕ್ರಮಗಳು ಜಾರಿಯಾಗಿವೆ. ಕರ್ನಾಟಕದಲ್ಲೂ ಇಂತಹದ್ದೇ ಕಠಿಣ ನಿಯಮಾವಳಿಗಳು ಜಾರಿಯಾಗಬಹುದು ಎಂಬ ವದಂತಿ ಹಬ್ಬಿದ್ದು, ಇದರಿಂದ ಭಯಭೀತರಾದ ಹೊರರಾಜ್ಯದ ಜನರು ಬೆಂಗಳೂರು ತೊರೆದು ತವರು ರಾಜ್ಯಗಳಿಗೆ ವಾಪಾಸ್ಸಾಗುತ್ತಿದ್ದಾರೆ.

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವುದರಿಂದ ಸರ್ಕಾರ ದಿನಕ್ಕೊಂದು ಕಾನೂನು ರೂಪಿಸುತ್ತಿದೆ. ಇನ್ನೊಂದೆಡೆ ಸಾರಿಗೆ ನೌಕರರ ಮುಷ್ಕರವೂ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಬಿಗಡಾಯಿಸಿದರೆ ಲಾಕ್​ಡೌನ್ ಆಗುವುದು ಖಚಿತ ಎಂಬ ವದಂತಿ ಹಬ್ಬಿದೆ. ಕಳೆದ ವರ್ಷದ ಲಾಕ್​ಡೌನ್​ ಸಂದರ್ಭದಲ್ಲಾಗಲೇ ಕಷ್ಟ ಅನುಭವಿಸಿರುವ ಜನರು ಈಗ ಮತ್ತೆ ಲಾಕ್​ಡೌನ್​ ಆಗಬಹುದೆಂದು ಹೆದರಿ ತಮ್ಮ ತವರಿಗೆ ಮರಳುತ್ತಿದ್ದಾರೆ.

ಉತ್ತರ ಪ್ರದೇಶ, ಒಡಿಶಾ, ರಾಜಸ್ಥಾನ, ಬಿಹಾರ, ಕೋಲ್ಕತ್ತಾ ರಾಜ್ಯಗಳಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಕೂಲಿ ಕಾರ್ಮಿಕರು ಸಿಕ್ಕ ಸಿಕ್ಕ ಬಸ್, ರೈಲುಗಳನ್ನೇರಿ ಹೊರಡುತ್ತಿದ್ದಾರೆ. ಈಗಾಗಲೇ ಉತ್ತರಪ್ರದೇಶ, ರಾಜಸ್ಥಾನ, ಕೊಲ್ಕತ್ತಾ ಭಾಗಕ್ಕೆ ಹೊರಡುವ ರೈಲುಗಳು ತುಂಬಿ ತುಳುಕಾಡುತ್ತಿದ್ದು, ಮತ್ತೆ ಲಾಕ್​ಡೌನ್ ಮಾಡುವ ಮೊದಲು ಊರು ಸೇರಿಕೊಳ್ಳುತ್ತೇವೆ ಎಂದು ಹೇಳುತ್ತಾ ಗುಳೆ ಹೊರಟಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯ ಲಾಕ್​ಡೌನ್ ಘೋಷಣೆ 

ಬಾಂಗ್ಲಾದೇಶದಲ್ಲಿ ಏಪ್ರಿಲ್ 1ರಿಂದ ಏಳು ದಿನಗಳ ಲಾಕ್​ಡೌನ್ ಘೋಷಣೆ

(Daily wage workers from outer states returning to their home due to the fear of Lockdown in Karnataka)

Follow Us
Skanda
Skanda
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​