AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನದಲ್ಲಿ ಅವ್ಯವಹಾರ ಆರೋಪ: ರಸ್ತೆಗೆ ಹಾಲು ಚೆಲ್ಲಿ ಪ್ರತಿಭಟನೆ

ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನದ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯದಲ್ಲಿ ನಡೆದಿದೆ. ರೈತರು ತಂದಿದ್ದ ಹಾಲನ್ನು ರಸ್ತೆಗೆ ಚೆಲ್ಲಿ ಧರಣಿ ನಡೆಸಿದರು.

ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನದಲ್ಲಿ ಅವ್ಯವಹಾರ ಆರೋಪ: ರಸ್ತೆಗೆ ಹಾಲು ಚೆಲ್ಲಿ ಪ್ರತಿಭಟನೆ
ಹಾಲು ರಸ್ತೆಗೆ ಚೆಲ್ಲಿ ಧರಣಿ ನಡೆಸಿದ ರೈತರು
KUSHAL V
| Updated By: ಆಯೇಷಾ ಬಾನು|

Updated on:Jan 11, 2021 | 10:51 AM

Share

ನೆಲಮಂಗಲ: ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನದ  ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಲು ಉತ್ಪಾದಕರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯದಲ್ಲಿ ನಡೆದಿದೆ. ಹಾಲು ಉತ್ಪಾದಕರು ತಾವು ತಂದಿದ್ದ ಹಾಲನ್ನು ರಸ್ತೆಗೆ ಚೆಲ್ಲಿ ಧರಣಿ ನಡೆಸಿದರು.

ಹಾಲು ಉತ್ಪಾದಕರ ಸಹಕಾರ ಸಂಘದ ಬಳಿ ರೈತರು ಧರಣಿಗೆ ಮುಂದಾದರು. ಇದೇ ವೇಳೆ, ಕಾರ್ಯದರ್ಶಿ ಮುದ್ದಹನುಮೇಗೌಡ ವಿರುದ್ಧ ಪ್ರೋತ್ಸಾಹ ಧನ ರೈತರಿಗೆ ಸರಿಯಾಗಿ ನೀಡದೆ ಅವ್ಯವಹಾರ ನಡೆಸುತ್ತಿರುವ ಆರೋಪ ಸಹ ಮಾಡಿದರು.

ಜೊತೆಗೆ, ಕಾರ್ಯದರ್ಶಿ ಮುದ್ದಹನುಮೇಗೌಡ ಅವರ ಪತ್ನಿ ಖಾತೆಗೆ 80 ಸಾವಿರ ಹಣ ಜಮೆ ಮಾಡಲಾಗಿದೆ ಎಂದೂ ಸಹ ಹಾಲು ಉತ್ಪಾದಕರು ಆರೋಪಿಸಿದರು. ಹೀಗಾಗಿ, ಕಾರ್ಯದರ್ಶಿಯನ್ನು ವಜಾಗೊಳಿಸುವಂತೆ ರೈತರ ಪ್ರತಿಭಟನೆ ನಡೆಸಿದರು. ಈ ವೇಳೆ, ಹಾಲಿನ ಡೈರಿ ಬಳಿ ಹಾಲು ಉತ್ಪಾದಕರು ಹಾಗೂ ಹಾಲು ಉತ್ಪಾದಕ ಸಂಘದ ನಡುವೆ ಗಲಾಟೆ ಸಹ ನಡೆಯಿತು.

Delhi Chalo ವಿಫಲಗೊಂಡ 8ನೇ ಸುತ್ತಿನ ಮಾತುಕತೆ, ಜನವರಿ 15ರಂದು ಮುಂದಿನ ಸಭೆ

Published On - 6:29 pm, Fri, 8 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ