AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ ಕಾಣಿಕೆ

ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮರೆದ ಯುವತಿಯಿಂದ ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಹಾಕಲಾಗಿದೆ. ತೀರ್ಥ ಸ್ನಾನ ಮಾಡಿ ತಪ್ಪು ಕಾಣಿಕೆ ಹಾಕಿದ ಬೆಂಗಳೂರು ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ.

ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ ಕಾಣಿಕೆ
ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ ಕಾಣಿಕೆ
TV9 Web
| Edited By: |

Updated on: Nov 04, 2022 | 9:25 AM

Share

ಮಂಗಳೂರು: ಸಾಮಾಜಿಕ ಜಾಲತಾಣ ಹೆಚ್ಚು ಅಪ್​ಡೇಟ್ ಆದಂತೆ ನೆಟ್ಟಿಗರು ಹೆಚ್ಚೆಚ್ಚು ಅದರಲ್ಲಿ ತೊಡಗಿಕೊಳ್ಳುತ್ತಾರೆ. ಸದ್ಯ ಒಂದಷ್ಟು ಮಂದಿ ರೀಲ್ಸ್​ ಮಾಡುವುದರಲ್ಲಿ ತೊಡಗಿಕೊಂಡು ಲೈಕ್​ ಮತ್ತು ಫೇಮಸ್ ಆಗಲು ಮುಂದಾಗುತ್ತಿದ್ದಾರೆ. ಇವರ ಈ ದುರಾಸೆ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮಾಡಿದ್ದಳು. ಇದು ದೈವ ಭಕ್ತರನ್ನು ಕೆರಳಿಸಿತ್ತು. ಸದ್ಯ ತನ್ನ ತಪ್ಪಿನ ಅರಿವಾದ ಹಿನ್ನೆಲೆ ಧರ್ಮಸ್ಥಳ ಮಂಜುನಾಥನ ಸನ್ನಿಧಾನಕ್ಕೆ ಆಗಮಿಸಿದ ಯುವತಿ ತೀರ್ಥ ಸ್ನಾನ ಮಾಡಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.

ಪಂಜುರ್ಲಿ ದೈವದ ಬಗ್ಗೆ ರೀಲ್ಸ್ ಮಾಡಿದ್ದ ಬೆಂಗಳೂರು ಮೂಲದ ಮೇಕಪ್ ಆರ್ಟಿಸ್ಟ್ ಆಗಿರುವ ಶ್ವೇತಾ ರೆಡ್ಡಿಗೆ ತಪ್ಪಿನ ಅರಿವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಬಳಿ ಬಂದು ಮುಂದೇ ಯಾವುದೇ‌ ತೊಂದರೆ ಆಗದಿರಲಿ‌ ಎಂದು ತಪ್ಪು ಕಾಣಿಕೆ ಹಾಕಿದ್ದಾಳೆ. ತೀರ್ಥ ಸ್ನಾನ ಮಾಡಿ ತಪ್ಪು ಕಾಣಿಕೆ ಹಾಕಿದ ಶ್ವೇತಾ, ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದಿದ್ದಾಳೆ. ಅಲ್ಲದೆ ಯಕ್ಷಗಾನ ಇದೆಲ್ಲವೂ ಒಂದೇ ಎಂದು ಅಂದುಕೊಂಡಿದ್ದೆ. ಇದೀಗ ನನಗೆ ಇವೆರೆಡು ಬೇರೆ-ಬೇರೆ ಅಂತ ತಿಳಿಯಿತು. ದೈವದ ಕೋಲ ನೋಡುವ ಅವಕಾಶ ಸಿಕ್ಕರೆ ನೋಡುತ್ತೇನೆ ಎಂದು ಹೇಳಿದ್ದಾಳೆ.

ಕಾಂತಾರ ಸಿನಿಮಾ ನೋಡಿದ ಶ್ವೇತಾ ರೆಡ್ಡಿ, ಪಂಜುರ್ಲಿ ದೈವದ ವೇಷಭೂಷಣ ಹಾಕಿ ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಿದ್ದಳು. ನಂತರ ಇದನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಳು. ವಿಡಿಯೋ ನೋಡಿದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವ್ಯಾಪಕ ಟೀಕೆಗೆ ಗುರಿಯಾದ ನಂತರ ಎಚ್ಚೆತ್ತ ಶ್ವೇತಾ ರೆಡ್ಡಿ ಕ್ಷಮೆ ಕೋರಿ ವಿಡಿಯೋ ಡಿಲಿಟ್ ಮಾಡಿದ್ದಳು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?