AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ಜಿಲ್ಲೆಯ ಬೈಕಂಪಾಡಿ, ಮೀನಕಳಿ ಹಾಗೂ ಇನ್ನಿತರ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

Mangaluru News: ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ
ಕಡಲ ತೀರ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on:Jul 12, 2023 | 9:47 AM

ಮಂಗಳೂರು: ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದೆ. ಇದೀಗ ಮಳೆ (Rain) ಅಬ್ಬರ ನಿಂತರೂ ಕಡಲ್ಕೊರೆತ (Sea Erosion) ನಿಂತಿಲ್ಲ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ‌ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Mangaluru News: ನಿಲ್ಲದ ಕಡಲ್ಕೊರೆತ, 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ

ಎಲ್ಲೆಲ್ಲಿ ಪ್ರಾಕೃತಿಕವಾಗಿ ಗಿಡ, ಮರಗಳು ಬೆಳೆದುಕೊಂಡಿದೆಯೋ ಅಂತಹ ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸುತ್ತಿಲ್ಲ. ಎಲ್ಲೆಲ್ಲಿ ಮರ, ಗಿಡಗಳನ್ನು ನಾಶಮಾಡಿ ಮನೆ, ರಸ್ತೆ ನಿರ್ಮಾಣವಾಗಿದೆ ಅಲ್ಲಿ ಮಾತ್ರ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ಅಧ್ಯಯನ ನಡೆಸಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಕರಾವಳಿಯ ಬೇರೆ ಭಾಗಕ್ಕೂ ಇದನ್ನು ವಿಸ್ತರಣೆ ಮಾಡಬಹುದು. ಕಡಲ್ಕೊರೆತ ತಡೆಯುವ ಜೊತೆ ಹಸಿರು ಪರಿಸರವು ನಿರ್ಮಾಣ ಆಗುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 am, Wed, 12 July 23

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು