AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಮೋದಿ ಕಾರ್ಯಕ್ರಮ ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಮಂಗಳೂರಿನಲ್ಲಿ ಮೂಲೆಗುಂಪು

ಅಂದು ದುಬೈನಲ್ಲಿನ ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಅವರು ಇಂದು ಮಂಗಳೂರಿನಲ್ಲಿ ಮೂಲೆಗುಂಪಾಗಿದ್ದಾರೆ. ಪೊಲೀಸರು ಶೆಟ್ಟಿ ಅವರನ್ನು ಒಳಗೆ ಪ್ರವೇಶ ಮಾಡಲು ನಿರಾಕರಿಸಿದ ಹಿನ್ನೆಲೆ ಅವರು ವಾಪಸ್ ಆಗಿದ್ದಾರೆ.

ದುಬೈನಲ್ಲಿ ಮೋದಿ ಕಾರ್ಯಕ್ರಮ ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಮಂಗಳೂರಿನಲ್ಲಿ ಮೂಲೆಗುಂಪು
ಉದ್ಯಮಿ ಬಿ.ಆರ್.ಶೆಟ್ಟಿ ಮತ್ತು ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Sep 02, 2022 | 9:13 PM

Share

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು  3,800 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ವೀಕ್ಷಿಸಲು ಬಂದ ಉದ್ಯಮಿ ಬಿ.ಆರ್.ಶೆಟ್ಟಿ ಮೂಲೆಗುಂಪಾಗಿದ್ದಾರೆ. ಪೊಲೀಸರು ಅವರನ್ನು ಗೇಟ್ ಒಳಗೆ ಪ್ರವೇಶವನ್ನು ನಿರಾಕರಿಸಿದ ಹಿನ್ನೆಲೆ ಸಭಾಂಗಣಕ್ಕೆ ಹೋಗಲಾರದೆ ಬಿ.ಆರ್. ಶೆಟ್ಟಿ ವಾಪಾಸಾಗಿದ್ದಾರೆ.

ಅಂದು ದುಬೈನಲ್ಲಿನ ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಅವರು ಇಂದು ಮಂಗಳೂರಿನಲ್ಲಿ ಮೂಲೆಗುಂಪಾಗಿದ್ದಾರೆ. ವಿಶ್ವದ ಹಲವು ದೇಶಗಳಲ್ಲಿ ಉದ್ದಿಮೆ ಹೊಂದಿರುವ ಶೆಟ್ಟಿ, ಮೋದಿ ಆಗಮಿಸಿದ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಆಗಮಿಸಿದಾಗ ಪೊಲೀಸರು ಗೇಟಿನೊಳಗೆ ಬಿಡದ ಹಿನ್ನೆಲೆ ಸಭಾಂಗಣಕ್ಕೆ ಹೋಗಲಾರದೆ ವಾಪಸ್ ತೆರಳಿದ್ದಾರೆ. ಶೆಟ್ಟಿ ಬೆಂಬಲಿಗರು ಕಾರ್ಯಕ್ರಮಕ್ಕೆ ಅವರನ್ನಾದರೂ ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಪೊಲೀಸರು ಒಳಗಡೆ ಪ್ರವೇಶ ನಿರಾಕರಿಸಿದ್ದಾರೆ.

ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ಶೆಟ್ಟಿ

ವಿಶ್ವದ ಹಲವು ದೇಶಗಳಲ್ಲಿ ಉದ್ದಿಮೆ ಹೊಂದಿರುವ ಬಿ.ಆರ್.ಶೆಟ್ಟಿ, ಮೋದಿಗೆ ಪರಿಚಿತರೂ ಆಗಿದ್ದರು. ಇಂತಹ ಶೆಟ್ಟಿ ಲಂಡನ್​ನಲ್ಲಿ ವಂಚನೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಆ ದೇಶದಲ್ಲಿ ಶೆಟ್ಟಿ ವಿರುದ್ಧ ಕೇಳಿಬಂದ ಆರೋಪ ಬರೋಬ್ಬರಿ 960 ಕೋಟಿ ರೂಪಾಯಿ ವಂಚನೆ. ಅದರಂತೆ ಬಿ.ಆರ್.ಶೆಟ್ಟಿ ಆಸ್ತಿ ಮುಟ್ಟುಗೋಲಿಗೆ ಲಂಡನ್​ ಕೋರ್ಟ್​ ಆದೇಶಿಸಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Fri, 2 September 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ