AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Fair: ಜೂ. 22ಕ್ಕೆ ಮಂಗಳೂರಿನಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ. ಜೂನ್ 22ರಂದು ಮಂಗಳೂರಿನ ಸರ್ಕಾರಿ ಐಟಿಐ (ಮಹಿಳಾ) ಆವರಣದಲ್ಲಿ ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಶಿಪ್ ಮೇಳ ನಡೆಯಲಿದೆ. ಐಟಿಐ ಉತ್ತೀರ್ಣ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಬಹುದು. ಹಲವು ಪ್ರತಿಷ್ಠಿತ ಕಂಪನಿಗಳು ನೇಮಕಾತಿ ನಡೆಸಲಿವೆ. ಮೂಲ ದಾಖಲೆಗಳೊಂದಿಗೆ ಹಾಜರಾಗಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Job Fair: ಜೂ. 22ಕ್ಕೆ ಮಂಗಳೂರಿನಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
ಮಂಗಳೂರಿನಲ್ಲಿ ಉದ್ಯೋಗ ಮೇಳImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jun 19, 2026 | 1:03 PM

Share

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ, ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್ 22ರಂದು ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಮೇಳವು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ಜರುಗಲಿದೆ.

ವಿವಿಧ ಉದ್ಯಮ ಸಂಸ್ಥೆಗಳಿಂದ ನೇಮಕಾತಿ ಪ್ರಕ್ರಿಯೆ:

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಹಲವಾರು ಪ್ರಮುಖ ಉದ್ಯಮ ಸಂಸ್ಥೆಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ. ಆಯಾ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹಾಗೂ ಅಪ್ರೆಂಟಿಶಿಪ್ ತರಬೇತಿ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ಈ ವೇದಿಕೆಯನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಅಥವಾ ತರಬೇತಿ ಪಡೆಯಲು ಬಯಸುವ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಐಟಿಐ ಉತ್ತೀರ್ಣ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅವಕಾಶ:

ಈ ಉದ್ಯೋಗ ಮೇಳದಲ್ಲಿ ಐಟಿಐ (ITI) ಕೋರ್ಸ್ ಮುಗಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಇದರೊಂದಿಗೆ ಪ್ರಸ್ತುತ ಐಟಿಐನಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಸಹ ಮೇಳದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅರ್ಹ ಆಸಕ್ತರು ತಮ್ಮ ಎಲ್ಲಾ ಅಗತ್ಯ ಮೂಲ ದಾಖಲಾತಿಗಳು ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಮೇಳಕ್ಕೆ ಹಾಜರಾಗಬೇಕಿದೆ.

ಪ್ರಾಚಾರ್ಯರಿಂದ ಸದುಪಯೋಗ ಪಡಿಸಿಕೊಳ್ಳಲು ಕರೆ:

ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉದ್ಯೋಗ ಮತ್ತು ಅಪ್ರೆಂಟಿಶಿಪ್ ಮೇಳದಲ್ಲಿ ಭಾಗವಹಿಸಿ, ಈ ಉದ್ಯೋಗಾವಕಾಶದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ತಮ್ಮ ಅಧಿಕೃತ ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ. ಸ್ಥಳೀಯ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಈ ಮೇಳ ಮಹತ್ವದ ಪಾತ್ರ ವಹಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Fri, 19 June 26

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ