AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧನ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ಧರಣಿ ಮಾಡಿ, ಪಿಎಸ್​ಐಗೆ ಧಮ್ಕಿ ಹಿನ್ನೆಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!
ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 19, 2024 | 8:44 PM

Share

ಮಂಗಳೂರು, ಮೇ 19: ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ. ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ಶಾಸಕ ಹರೀಶ್ ಪೂಂಜಾ ಆಪ್ತರನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆ ನಿಮ್ಮಪ್ಪಂದಾ ಅಂತಾ PSI ಮುರಳೀಧರ್ ನಾಯ್ಕ್‌ಗೆ ಧಮ್ಕಿ ಕೂಡ ಹಾಕಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಅತ್ತ ಬಂಧನವಾಗುತ್ತಿದ್ದಂತೆ ಇತ್ತ ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ, ಕಾರ್ಯಕರ್ತರು ಧರಣಿ ಮಾಡಿದ್ದಾರೆ. ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಬಂಧಿಸಿದ್ದೀರೆಂದು ಪಿಎಸ್‌ಐಗೆ ಧಮ್ಕಿ ಹಾಕಿದ್ದಾರೆ. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಕಲ್ಲು ಕ್ವಾರಿ ಮಾಲೀಕ ಪ್ರಮೋದ್ ದಿಡುಪೆ ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More