AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧನ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ಧರಣಿ ಮಾಡಿ, ಪಿಎಸ್​ಐಗೆ ಧಮ್ಕಿ ಹಿನ್ನೆಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!
ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಆಕ್ರೋಶ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 19, 2024 | 8:44 PM

Share

ಮಂಗಳೂರು, ಮೇ 19: ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ. ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ಶಾಸಕ ಹರೀಶ್ ಪೂಂಜಾ ಆಪ್ತರನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆ ನಿಮ್ಮಪ್ಪಂದಾ ಅಂತಾ PSI ಮುರಳೀಧರ್ ನಾಯ್ಕ್‌ಗೆ ಧಮ್ಕಿ ಕೂಡ ಹಾಕಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಅತ್ತ ಬಂಧನವಾಗುತ್ತಿದ್ದಂತೆ ಇತ್ತ ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ, ಕಾರ್ಯಕರ್ತರು ಧರಣಿ ಮಾಡಿದ್ದಾರೆ. ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಬಂಧಿಸಿದ್ದೀರೆಂದು ಪಿಎಸ್‌ಐಗೆ ಧಮ್ಕಿ ಹಾಕಿದ್ದಾರೆ. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಕಲ್ಲು ಕ್ವಾರಿ ಮಾಲೀಕ ಪ್ರಮೋದ್ ದಿಡುಪೆ ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್