AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಭೆ; ಇಂಟರ್​ನೆಟ್ ಸಂಪರ್ಕ​ ಸ್ಥಗಿತಕ್ಕೆ ಮನವಿ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರ ಶಾಂತಿ ಸಭೆಯ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಇಂಟರ್ನೆಟ್ ಸಂಪರ್ಕಕ್ಕೆ ಮನವಿ ಮಾಡಿದ್ದಾರೆ. ಇಂತಹ ಅನೇಕ ಅಭಿಪ್ರಾಯಗಳು ಶಾಂತಿಸಭೆಯಲ್ಲಿ ವ್ಯಕ್ತವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಭೆ; ಇಂಟರ್​ನೆಟ್ ಸಂಪರ್ಕ​ ಸ್ಥಗಿತಕ್ಕೆ ಮನವಿ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು
ಶಾಂತಿ ಸಭೆ
TV9 Web
| Edited By: |

Updated on:Jul 30, 2022 | 2:06 PM

Share

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಜನಪ್ರತನಿಧಿಗಳು ಪ್ರಚೋಧನಕಾರಿ ಭಾಷಣ ನಿಲ್ಲಿಸುವಂತೆ ಹಾಗೂ ಮಾಧ್ಯಮಗಳಲ್ಲಿ ಕರಾವಳಿಯಲ್ಲಿ ಬೆಂಕಿ, ಕೊತಕೊತ ಎಂಬಿತ್ಯಾದಿ ರೀತಿಯಲ್ಲಿ ಸುದ್ದಿವಾಹಿನಿಗಳ ಡಿಬೇಟ್​ಗಳನ್ನು ನಡೆಸುವುದನ್ನು ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಪ್ರಚೋದನಕಾರಿ ಸಂದೇಶಗಳ ರವಾನೆಯನ್ನು ನಿಲ್ಲಿಸುವ ನಿಟ್ಟಿನಲ್ಲಿ ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮನವಿ ಮಾಡಿದ್ದಾರೆ.

ಶಾಂತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಇಲ್ಲದಿರುವುದನ್ನು ಗಮನಿಸಿದ ಮುಖಂಡರು ಅಸಮಧಾನ ವ್ಯಕ್ತಪಡಿಸಿದರು. ತಳಮಟ್ಟದ ಜನಪ್ರತಿನಿಧಿಗಳು ಇಲ್ಲ. ನಾವು ಹೋಗಿ ಊರಿನಲ್ಲಿ ಹೇಳಿದರೆ ಯಾರೂ ಕೇಳುವುದಿಲ್ಲ. ಜನಪ್ರತಿನಿಧಿಗಳು ಹೇಳಿದರೆ ಕೇಳುತ್ತಾರೆ. ಆದರೆ ಶಾಂತಿ ಸಭೆಯಲ್ಲಿ ಅವರೇ ಇಲ್ಲ. ಮೊದಲು ಅವರನ್ನು ಕರೆದು ಶಾಂತಿ ಸಭೆ ನಡೆಸಿ ಎಂದು ಸಭೆಯಲ್ಲಿ ನೆರೆದಿದ್ದವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸಿಎಎ ವಿಚಾರದಲ್ಲಿ ಗಲಭೆ ಆದಾಗ ತಕ್ಷಣ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಯಿತು, ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು. ಇದೇ ರೀತಿ ಈಗ ಕೂಡ ಮಾಡಬೇಕಿದೆ. ಪ್ರಚೋದಮಕಾರಿ ಸಂದೇಶಗಳು ರವಾನಿಸುವುದನ್ನು ತಡೆಯಲು ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಬಂದ್ ಮಾಡುವಂತೆ ಮಿಥುನ್ ರೈ ಮನವಿ ಮಾಡಿದರು.

ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು

ಶಾಂತಿ ಸಭೆಗೆ ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರಾಗಿರುವುದು ಕಂಡುಬಂದಿವೆ. ಈ ಬಗ್ಗೆ ಬೊಟ್ಟು ಮಾಡಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೋ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರಾಗಲು ಕಾರಣ ಮುಖ್ಯಮಂತ್ರಿಗಳ ತಾರತಮ್ಯ. ಕೇವಲ ಪ್ರವೀಣ್ ನೆಟ್ಟಾರು ಅವರ ಮನೆಗೆ ಮಾತ್ರ ಭೇಟಿ ನೀಡಿದ್ದಾರೆ. ಆದರೆ ಅಲ್ಲೇ ಸಮೀಪದ ಮಸೂದ್ ಮನೆಗೆ ಭೇಟಿ ನೀಡಲಿಲ್ಲ. ಪ್ರವೀಣ್ ಕುಟುಂಬಕ್ಕೆ ಮಾತ್ರ ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಮುಖ ಮುಸ್ಲಿಂ ಸಂಘಟನೆ ಭಾಗವಹಿಸಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ ಡ್ರಗ್ಸ್ ಮತ್ತು ಗಾಂಜಾ ಮಾಫೀಯಾ ನಿಲ್ಲಿಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ಮಂಗಳೂರು ಅಪರಾಧದ ಜಿಲ್ಲೆಯಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಹಾಳಾಗಿದೆ. ಎಲ್ಲಾ ಕಡೆ ಸೆಕ್ಷನ್ 144 ಹಾಕಿ ಜನರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

ಜಾಗೃತರಾಗಿರಿ ಎಂದು ಪೊಲೀಸರನ್ನು ಎಚ್ಚರಿಸಿದ ವ್ಯಕ್ತಿ

ಶಾಂತಿ ಸಭೆಯಲ್ಲಿ ಭಾಗೀಯಾದ ಉಪ್ಪಿನಂಗಡಿ ವ್ಯಕ್ತಿಯೊಬ್ಬರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾಗ ಪೊಲೀಸರನ್ನು ಜಾಗೃತರಾಗಿರಿ ಎಂದು ಎಚ್ಚರಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಗಳೇ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಾತನಾಡಿ, ಕೊಲೆ ನಡೆದ ತಕ್ಷಣ ಅದರ ಕಾರಣದ ಬಗ್ಗೆ ಸುಳ್ಳು ಮಾಹಿತಿ ಹೋಗಿದೆ. ಫಾಝಿಲ್ ಕೊಲೆಯಲ್ಲಿ ಲವ್ ಇತ್ತು ಅಂತಾ ಕೆಲ ಮಾಧ್ಯಮಗಳು ಸುದ್ದಿ ಬಿತ್ತರ ಮಾಡಿತ್ತು. ಇಂತಹ ಸುಳ್ಳು ಸುದ್ದಿಗಳಿಂದ ಶಾಂತಿ ಭಂಗ ಆಗುತ್ತದೆ. ಈ ರೀತಿ ಸುದ್ದಿ ಮಾಡಿವವರ ಮೇಲೆ ಸುಮೋಟೊ ಕೇಸ್ ಹಾಕುವಂತೆ ಮನವಿ ಮಾಡಿದರು.

ಖಾಸಗಿ ಬಸ್​ಗಳ ಸಂಚಾರ ಸ್ಥಗಿತಕ್ಕೆ ಮನವಿ

ಮಂಗಳೂರಿನಲ್ಲಿ ಸೆಕ್ಷನ್ 144 ಜೊತೆಗೆ ಖಾಸಗಿ ಬಸ್ ಓಡಾಟ ನಿಲ್ಲಿಸಿದರೆ ಇಂತಹ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎಂದು ಮತ್ತೊಬ್ಬ ವ್ಯಕ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಾತನಾಡಿ, ನಾವು ಗಾಂಜಾ ಮಾರಾಟ ಆಗುತ್ತಿದೆ ಅಂತಾ ಮಾಹಿತಿ ಕೊಟ್ಟರೆ ಗಾಂಜಾ ಮಾರಾಟ ಮಡುವವನಿಗೆ ಈ ವಿಚಾರ ತಲುಪುತ್ತದೆ. ಹೀಗಿದ್ದಾಗ ನಾವು ಮಾಹಿತಿ ಕೊಡುಲು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಶಾಂತಿ ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಹಿಂದೂ ಮತ್ತು ಮುಸ್ಲಿಂ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Published On - 2:06 pm, Sat, 30 July 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ