AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Halal Tag: ಹಲಾಲ್ ಟ್ಯಾಗ್ ಇರುವ ವಸ್ತು ಬಳಸದಂತೆ ಜನಜಾಗೃತಿ

ಯುಗಾದಿ ಬಳಿಕ ಇದೀಗ ದೀಪಾವಳಿ ಸಮಯದಲ್ಲಿಯೂ ಧರ್ಮ ದಂಗಲ್ ಹೆಚ್ಚಾಗಿದ್ದು, ಕರಾವಳಿ ಭಾಗದಲ್ಲಿ ಹಲಾಲ್ ಟ್ಯಾಗ್ ವಸ್ತುಗಳನ್ನು ಬಳಸದಂತೆ ಹಿಂದೂಗಳಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ.

Halal Tag: ಹಲಾಲ್ ಟ್ಯಾಗ್ ಇರುವ ವಸ್ತು ಬಳಸದಂತೆ ಜನಜಾಗೃತಿ
ಹಲಾಲ್ ವಿರುದ್ಧ ಅಭಿಯಾನ ಮತ್ತು ಪ್ರತಿಭಟನೆ
TV9 Web
| Updated By: Rakesh Nayak Manchi|

Updated on:Oct 23, 2022 | 2:34 PM

Share

ಮಂಗಳೂರು: ಯುಗಾದಿ ಸಮಯದಲ್ಲಿ ಹಲಾಲ್ ಬಹಿಷ್ಕಾರ ಜೋರಾಗಿ ಕೇಳಿಬಂದಿತ್ತು. ಇದೀಗ ದೀಪಾವಳಿ ಸಮಯದಲ್ಲಿಯೂ ಅಂತಹದ್ದೇ ಕೂಗು ಬಲವಾಗಿ ಕೇಳಿಬರಲು ಆರಂಭವಾಗಿದ್ದು, ಹಲಾಲ್ ಟ್ಯಾಗ್ ಇರುವ ವಸ್ತುಗಳನ್ನ ಬಹಿಷ್ಕರಿಸುವಂತೆ ಕರಾವಳಿ ಭಾಗಗಳಲ್ಲಿ ಕರೆ ನೀಡಲಾಗಿದೆ. ಹಲಾಲ್ ಟ್ಯಾಗ್ ಇರುವ ವಸ್ತು ಬಳಸದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿ‌ ವತಿಯಿಂದ ಅಭಿಯಾನ ಆರಂಭಿಸಲಾಗಿದೆ. ಮನೆ, ಅಂಗಡಿಗಳಿಗೆ ತೆರಳಿ ಕರಪತ್ರ ಹಂಚಿ ಹಲಾಲ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಮಂಗಳೂರು, ಪುತ್ತೂರು ಸೇರಿದಂತೆ ವಿವಿಧೆಡೆ ಪ್ರತಿಭಟನೆಯೂ ನಡೆಯುತ್ತಿದೆ.

ದೀಪಾವಳಿ ಹಬ್ಬದ ಖರೀದಿ ಸಂದರ್ಭದಲ್ಲಿ ಹಿಂದೂಗಳು ಹಲಾಲ್ ಟ್ಯಾಗ್ ಇರುವ ವಸ್ತುಗಳನ್ನು ಖರೀದಿಸದಂತೆ ಹಾಗೂ ಅದನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಅಭಿಯಾನ ಆರಂಭಿಸಿದ ಹಿಂದೂ ಜನಜಾಗೃತಿ ಸಮಿತಿ ಕರ ಪತ್ರಗಳನ್ನು ಹಂಚುವಲ್ಲಿ ತೊಡಗಿಕೊಂಡಿದೆ.

ದೇಶದ ಆರ್ಥಿಕ ವ್ಯವಸ್ಥೆಗೆ ಸವಾಲಾಗಿ ಪರ್ಯಾಯ ಹಲಾಲ್ ಆರ್ಥಿಕತೆಯ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದ್ದು, ಪ್ರತಿ ಉತ್ಪನ್ನಕ್ಕೆ ಹಲಾಲ್ ಪ್ರಮಾಣ ಪತ್ರ ನೀಡಲು ಇಸ್ಲಾಮಿ ಸಂಸ್ಥೆಗಳು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿವೆ. ಹೀಗೆ ಸಂಗ್ರಹವಾದ ಹಣದಲ್ಲಿ ಸಾವಿರಾರು ಕೋಟಿ ರೂಪಾಯಿ ಭಯೋತ್ಪಾದಕ ಸಂಘಟನೆಗಳಿಗೆ ನೀಡಿರುವ ಆರೋಪ ಮಾಡಲಾಗುತ್ತಿದೆ. ಈ ಎಲ್ಲದರ ಬಗ್ಗೆ ಕರಪತ್ರ ಹಂಚುವ ಮೂಲಕ ಹಾಗೂ ವಿವಿಧ ಕಡೆಗಳಲ್ಲಿ ಪ್ರತಿಭಟನೆ ಮಾಡಿ ಜಾಗೃತಿ ಮೂಡಿಸಲಾಗುತ್ತಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Sun, 23 October 22

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ