AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆಕಾರು ಬ್ಯಾಂಕಿನಲ್ಲಿ 10ರಿಂದ 12 ಕೋಟಿ​ ದರೋಡೆ ಆಗಿದ್ಹೇಗೆ? ಖದೀಮರ ಪಕ್ಕಾ ಪ್ಲ್ಯಾನ್ ಹೇಗಿತ್ತು ಗೊತ್ತಾ?

ಬೀದರ್​ನಲ್ಲಿ ಗುಂಡಿನ ದಾಳಿ ನಡೆಸಿ ಬರೋಬ್ಬರಿ 87 ಲಕ್ಷ ರೂ ಹಣವಿದ್ದ ಟ್ರಂಕ್ ಹೊತ್ತೊಯ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೋಟೆಕಾರು (Kotekar) ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ (Co Operative Bank) ಭಾರೀ ದರೋಡೆ ನಡೆದಿದೆ. ಬಂದೂಕು ತೋರಿಸಿ ಚಿನ್ನ, ನಗರದ ಸೇರಿದಂತೆ ಸುಮಾರು 10 ರಿಂದ 12 ಕೋಟಿ ರೂ. ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ದರೋಡೆಕೋರರ ಪ್ಲ್ಯಾನ್ ಹೇಗಿತ್ತು ನೊಡಿ

ಕೋಟೆಕಾರು ಬ್ಯಾಂಕಿನಲ್ಲಿ 10ರಿಂದ 12 ಕೋಟಿ​ ದರೋಡೆ ಆಗಿದ್ಹೇಗೆ? ಖದೀಮರ ಪಕ್ಕಾ ಪ್ಲ್ಯಾನ್ ಹೇಗಿತ್ತು ಗೊತ್ತಾ?
ಕೋಟೆಕಾರು ಬ್ಯಾಂಕ್​ ದರೋಡೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 17, 2025 | 4:09 PM

Share

ಮಂಗಳೂರು, (ಜನವರಿ 17): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್‌ ಶಾಕೆಯ  ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ ಆಗಂತುಕರು ಬ್ಯಾಂಕ್‌ಗೆ ನುಗ್ಗಿ ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ. ಚಿನ್ನ ಹಾಗೂ ನಗದು ಸೇರಿದಂತೆ ಬರೋಬ್ಬರಿ 10ರಿಂದ 12 ಕೋಟಿ ರೂ ಹಣ ಎಗರಿಸಿಕೊಂಡು ಹೋಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಇದೇ ಬ್ಯಾಂಕ್​ನಲ್ಲಿ ಈ ಹಿಂದೆಯೂ ಸಹ ಕಳ್ಳತನವಾಗಿತ್ತು.

ಪಕ್ಕಾ ಪ್ಲ್ಯಾನ್​ ಮಾಡಿಯೇ ದರೋಡೆ

ನಾಲ್ಕೈದು ಚೀಲದಲ್ಲಿ ಹಣ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ. ಇನ್ನು ಸಿಸಿ ಕ್ಯಾಮರಾ ರಿಪೇರಿ ಮಾಡಲು ಬಂದವನ ಊಂಗುರವನ್ನು ಸಹ ದೋಚಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಪಕ್ಕಾ ಪ್ಲ್ಯಾನ್ ಮಾಡಿ ದರೋಡೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಪೊಲೀಸರ ಹೆಚ್ಚಿನ ಭದ್ರತೆಯಲ್ಲಿದ್ದರು. ಹಾಗೇ ಇಂದು ಶುಕ್ರವಾರ ಆದ ಕಾರಣ ಮುಸ್ಲಿಮರು ನಮಾಜ್​ಗಾಗಿ ಮಧ್ಯಾಹ್ನ ಮಸೀದಿಗೆ ತೆರಳಿದ್ದಾರೆ. ಇನ್ನು ಬ್ಯಾಂಕ್ ಸಿಸಿ ಕ್ಯಾಮೆರಾ ಕೂಡ ಹಾಳಾಗಿದ್ದು, ಅದನ್ನು ಇಂದೇ ರಿಪೇರಿಗೆ ನೀಡಲಾಗಿತ್ತು.  ಸಿಸಿ ಕ್ಯಾಮರಾ ರಿಪೇರಿಗೆ ಮಾಡುವ ವೇಳೆ ಅದರ ವೈಯರ್ ಕಟ್​​ ಮಾಡಿದ ತಕ್ಷಣವೇ ಈ ಕೃತ್ಯ ಎಸಗಿದ್ದಾರೆ. ಇನ್ನು  ಇಡೀ ರಸ್ತೆಯ ಉದ್ದಕೂ ಒಂದೇ ಒಂದು ಸಿಸಿಟಿವಿ ಇಲ್ಲ. CCTV ಇಲ್ಲದನ್ನು ಗಮನಿಸಿಯೇ ಬ್ಯಾಂಕ್​​ ದರೋಡೆ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬೀದರ್ ಬಳಿಕ ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ

ಈ ಹಿಂದೆಯೂ ಇದೇ ಬ್ಯಾಂಕ್​ನಲ್ಲಿ ದರೋಡೆಯಾಗಿತ್ತು

ಐದು ವರ್ಷಗಳ ಹಿಂದೆಯೇ ಇದೇ ಬ್ಯಾಂಕ್ ಕಳ್ಳತನವಾಗಿತ್ತು. ಗನ್,ತಲ್ವಾರ್, ಚಾಕು ತೋರಿಸಿ ದರೋಡೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ಮಾದರಿಯಲ್ಲಿ  ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಲಾಗಿದೆ. ಇನ್ನು  ದರೋಡೆಕೋರರ ಪತ್ತೆ ಪೊಲೀಸರು ಎರಡು ತಂಡಗಳ ರಚನೆ ಮಾಡಲಾಗಿದೆ. ಇನ್ನು ಬ್ಯಾಂಕಿಗೆ ಒಬ್ಬ ಸೆಕ್ಯೂರಿಟಿ ಕೂಡ ಇಲ್ಲ. ಇನ್ನು ಸ್ಥಳೀಯರು ಬ್ಯಾಂಕ್ ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಗರಂ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳೂರು ಜಿಲ್ಲಾ ಪ್ರವಾಸ ಇರುವಾಗಲೇ ಈ ಕೃತ್ಯ ನಡೆದಿದೆ. ಹೀಗಾಗಿ ಈ ಬಗ್ಗೆ ಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ದರೋಡೆಕೋರರು ತಪ್ಪಿಸಿಕೊಂಡಿದ್ದಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳ ಮೇಲೆ ಗಂರ ಆಗಿದ್ದಾರೆ. ಅಲ್ಲದೇ ಎಲ್ಲಾ ಟೋಲ್‌, ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Published On - 3:58 pm, Fri, 17 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್