AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ಹೆಣ್ಣು ಹುಲಿ ಸಾವು

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ನೇತ್ರಾವತಿ ಎಂಬ ಹೆಸರಿನ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಪಿಲಿಕುಳ ಕೇಂದ್ರದ ನಿರ್ದೇಶಕ ಹೆಚ್​. ಜೆ. ಭಂಡಾರಿ ಅವರು ಬುಧವಾರ ತಿಳಿಸಿದ್ದಾರೆ.

Mangaluru News: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ಹೆಣ್ಣು ಹುಲಿ ಸಾವು
ಮೃತ ನೇತ್ರಾವತಿ ಹೆಸರಿನ ಹೆಣ್ಣು ಹುಲಿ
ಗಂಗಾಧರ​ ಬ. ಸಾಬೋಜಿ
|

Updated on:Jun 07, 2023 | 5:42 PM

Share

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನ (Pilikula Biological Park) ದಲ್ಲಿ 15 ವರ್ಷದ ನೇತ್ರಾವತಿ ಎಂಬ ಹೆಸರಿನ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಪಿಲಿಕುಳ ಕೇಂದ್ರದ ನಿರ್ದೇಶಕ ಹೆಚ್​. ಜೆ. ಭಂಡಾರಿ ಅವರು ಬುಧವಾರ ತಿಳಿಸಿದ್ದಾರೆ.  ಅಧಿಕಾರಗಳ ಪ್ರಕಾರ ಜೂ. 4ರಂದು ಆರು ವರ್ಷದ ಗುಂಡು ಹುಲಿ ರೇವಾ ಮತ್ತು ನೇತ್ರಾವತಿ ಮಧ್ಯೆ ನಡೆದ  ಕಾದಾಟದಲ್ಲಿ ಹೆಣ್ಣು ಹುಲಿ ಗಾಯಗೊಂಡಿತ್ತು. ಈ ವೇಳೆ ಗಾಯಗೊಂಡಿದ್ದ ಹುಲಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ.

2 ಹುಲಿಗಳ ಕಾದಾಟ

ರೇವಾ ಗಂಡು ಹುಲಿಯು ಬೆದೆಗೆ ಬಂದಿರುದರಿಂದ ನೇತ್ರವತಿಯ ಸಂಪರ್ಕಕ್ಕೆ ಬಂದಾಗ ಹೆಣ್ಣು ಹುಲಿಯು ರೇವಾನ ಮೇಲೆರಗಿತ್ತು. ಇಬ್ಬರ ಮಧ್ಯೆ ನಡೆದ ಕಾದಾಟದ ಸ್ಥಳದಲ್ಲಿದ್ದ ಅಧಿಕಾರಿ ಸಿಬ್ಬಂದಿಗಳು ಪರಿಸ್ಥಿಯನ್ನು ಹತೋಟಿಗೆ ತಂದು, ಕೂಡಲೆ ಬೋನ್​​ ಒಳಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Chikkamagaluru News: ಅಸ್ಸಾಂ ಮೂಲದ ಮಹಿಳೆ ಮೇಲೆ‌ ಹುಲಿ ದಾಳಿ: ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಪಿಲಿಕುಲದ ವೈದ್ಯಾಧಿಕಾರಿ, ವೈಜ್ಞಾನಿಕ ಅಧಿಕಾರಿಗಳು ಚಿಕಿತ್ಸೆ ನೀಡಿದ್ದು, ನೇತ್ರಾವತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ನೀರು ಮತ್ತು ಆಹಾರ ಸೇವಿಸುತಿತ್ತು. ಆದರೆ ಈ ದಿನ ಬೆಳಗ್ಗೆ ವೈದ್ಯಾಧಿಕಾರಿ ಚಿಕಿತ್ಸೆ  ನಿಡುತ್ತಿರುವಾಗಲೇ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದೆ ಎಂದರು.

ಹೃದಯಾಘಾತದಿಂದ ಸಾವು ಶಂಕೆ

ದೇಹದಲ್ಲಿ ಮೇಲ ನೋಟತಕ್ಕೆ, ಗಾಯಗಳಿದ್ದು, ಕಾದಾಟದ ತೀವ್ರತೆಯಿಂದ ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತರೆ ಅಂತರಿಕ ಗಾಯ ಮತ್ತು ಕಾರಣ ಮರಣೋತ್ತರ ಪರೀಕ್ಷೆಯಿಂದ ತಿಳಿಯಬೇಕಿದೆ ಎಂದು ಹೇಳಿದರು. ರೇವಾನಿಗೆ ಸಣ್ಣಪುಟ್ಟ ಗಾಯಗಳಗಿದ್ದು ಅಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: Python: ಕಾಫಿ ತೋಟದಲ್ಲಿ ನಾಯಿ ತಿಂದು ಮಲಗಿದ್ದ ಹೆಬ್ಬಾವು, ಅಬ್ಬಬ್ಬಾ ಮೈ ಜುಮ್ ಎನ್ನುವ ರಕ್ಷಣಾ ಕಾರ್ಯಚರಣೆ

ನೇತ್ರಾವತಿ (15) ಮತ್ತು ರೇವಾ (6) ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿಗಳಾಗಿವೆ. ಸದ್ಯ ಪಿಲಿಕುಳದಲ್ಲಿ 8 ಹುಲಿಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:41 pm, Wed, 7 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ