AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ ಹೀಗೆ?

ಆರು ತಿಂಗಳಿನಿಂದ ನಗರದ ಮಣ್ಣಗುಡ್ಡ ಹಾಗೂ ಬೈಕಂಪಾಡಿ ಪ್ರದೇಶದಲ್ಲಿ ಮಂಗಳೂರು ನಗರ ಪಾಲಿಕೆಯ ಈ ವಾಹನಗಳು ನಿಂತಲ್ಲೇ ನಿಂತಿವೆ. ವಾಹನಗಳು ಸ್ಟಾರ್ಟ್ ಮಾಡುವ ಸ್ಥಿತಿಯಲ್ಲಿ ಇವೆಯೋ ಎಂಬ ಸಂಶಯ ಮೂಡಿದೆ. ಶೀಘ್ರವೆ ಟೆಂಡರ್ ಪೂರ್ಣಗೊಳಿಸಿ ಸದುದ್ದೇಶಕ್ಕೆ ಖರೀದಿಸಿದ ಈ ವಾಹನಗಳ ಬಳಕೆ ಸರಿಯಾದ ಸಮಯಕ್ಕೆ ಆಗಬೇಕಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ  ಹೀಗೆ?
ಮಂಗಳೂರು ಪಾಲಿಕೆಯ 153 ವಾಹನ ನಿಂತಲ್ಲೇ ತುಕ್ಕು ಹಿಡಿಯುತ್ತಿವೆ, ಹೀಗೆ ಯಾಕೆ?
ಅಶೋಕ್​ ಪೂಜಾರಿ
| Edited By: ಸಾಧು ಶ್ರೀನಾಥ್​|

Updated on: Dec 05, 2023 | 3:08 PM

Share

ಮಂಗಳೂರು ನಗರ ಪಾಲಿಕೆ (Mangalore Municipal Corporation) 60 ವಾರ್ಡ್‌ಗಳನ್ನು ಒಳಗೊಂಡ ಬೃಹದಾದ ಪಾಲಿಕೆ. ಈ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು (Garbage) ಖುದ್ದು ಪಾಲಿಕೆಯೇ ವಹಿಸಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದೆ. ಇದಕ್ಕಾಗಿ 30 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿ ನಡೆದಿದೆ. ಆದ್ರೆ ಈ ವಾಹನಗಳನ್ನು ಖರೀದಿ ಮಾಡಿ ಆರು ತಿಂಗಳೇ ಕಳೆದರೂ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವಂತಾಗಿದೆ (Rusting). ಸಾಲಿನಲ್ಲಿ ನಿಲ್ಲಿಸಿರುವ ಈ ವಾಹನಗಳನ್ನು ನೋಡುವಾಗ ನಿಮಗೆ ಬಳಕೆ ಮಾಡಿರುವ ವಾಹನದಂತೆ ಕಾಣಿಸಬಹುದು. ಆದ್ರೆ ಇದು ಬಳಕೆ ಮಾಡಿರುವ ವಾಹನವಲ್ಲ. ಬದಲಾಗಿ ಶೋ ರೂಂನಿಂದ ನೇರವಾಗಿ ತಂದು ಬಳಕೆ ಮಾಡದೆ ತೆರೆದ ಪ್ರದೇಶದಲ್ಲಿ ಇಟ್ಟಿರುವುದರಿಂದ ಈ ಹೊಸ ವಾಹನಗಳು ಹಳೆ ವಾಹನಗಳಂತಾಗಿವೆ. ತ್ಯಾಜ್ಯ ವಿಲೇವಾರಿಗೆ ಬಳಸುವ ಈ ವಾಹನಗಳು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿರೋದು.

ಮಂಗಳೂರು sಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿ 30 ಕೋಟಿ ರೂ ವೆಚ್ಚದಲ್ಲಿ ಈ ವಾಹನಗಳನ್ನು ಖರೀದಿ ಮಾಡಲಾಗಿದೆ. 107 ಸಣ್ಣ ವೆಹಿಕಲ್, 30 ಟಿಪ್ಪರ್, 16 ಕಾಂಪ್ಯಾಕ್ಟರ್ ಸೇರಿದಂತೆ 153 ಈ ನೂತನ ವಾಹನಗಳನ್ನು ಖರೀದಿಸಿ ಆರು ತಿಂಗಳು ಕಳೆದಿದೆ. ಆದ್ರೆ ಈ ವಾಹನಗಳಿಗೆ ಡ್ರೈವರ್, ಲೋಡರ್ ಕೆಲಸ, ವರ್ಕ್‌ಶಾಪ್ ಹಾಗೂ ಮೂರು ವರ್ಷದ ನಿರ್ವಹಣೆಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆ ತಡವಾಗಿರುವ ಹಿನ್ನೆಲೆಯಲ್ಲಿ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವ ಪರಿಸ್ಥಿತಿ ಎದುರಾಗಿದೆ ಎನುತ್ತಾರೆ ಎ.ಸಿ ವಿನಯ್‌ರಾಜ್, ಪಾಲಿಕೆ ಸದಸ್ಯ-ಮಂಗಳೂರು ಮಹಾನಗರ ಪಾಲಿಕೆ.

ಕಳೆದ ಏಳು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು ಆ್ಯಂಟನಿ ಹೆಸರಿನ ಖಾಸಗಿ ಸಂಸ್ಥೆ ವಹಿಸಿಕೊಂಡಿತ್ತು. ಆದ್ರೆ ಈ ಸಂಸ್ಥೆಯ ಟೆಂಡರ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಆ್ಯಂಟನಿ ಸಂಸ್ಥೆಯ ಬದಲು ಮಹಾನಗರ ಪಾಲಿಕೆಯೇ ಸ್ವತಃ ತ್ಯಾಜ್ಯ ವಿಲೇವಾರಿ ಮಾಡಲು ಯೋಜನೆ ಹಾಕಿಕೊಂಡಿದೆ.

ಇದಕ್ಕಾಗಿಯೇ ಈ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಪ್ರಸ್ತುತ ಬಿಜೆಪಿ ಆಡಳಿತದ ಅವಧಿಯಲ್ಲಿ ಖರೀದಿಸಲಾಗಿದೆ. ಆದ್ರೆ ಈ ವಾಹನಗಳ ನಿರ್ವಹಣೆಯ ಟೆಂಡರ್‌ ಕರೆಯುವ ವಿಚಾರದಲ್ಲಿ ಗೊಂದಲ ಉಂಟಾಗಿರುವುದರಿಂದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದೆ. ಈ ವಿಚಾರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಯೂ ಚರ್ಚೆಯಾಗಿದ್ದು ವಿಪಕ್ಷ ಸದಸ್ಯರು ಶೀಘ್ರ ಈ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಆಯಾ ವಲಯದಲ್ಲಿ ಈ ವಾಹನಗಳನ್ನು ನಿಲ್ಲಿಸುವ ವ್ಯವಸ್ಥೆ ಸೇರಿದಂತೆ ನಿರ್ವಹಣೆಗೆ ಬೇಕಾದ ಕ್ರಮ ಕೈಗೊಳ್ಳುವುದಾಗಿ ಮೇಯರ್ ತಿಳಿಸಿದ್ದಾರೆ.

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ