AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ ಹೀಗೆ?

ಆರು ತಿಂಗಳಿನಿಂದ ನಗರದ ಮಣ್ಣಗುಡ್ಡ ಹಾಗೂ ಬೈಕಂಪಾಡಿ ಪ್ರದೇಶದಲ್ಲಿ ಮಂಗಳೂರು ನಗರ ಪಾಲಿಕೆಯ ಈ ವಾಹನಗಳು ನಿಂತಲ್ಲೇ ನಿಂತಿವೆ. ವಾಹನಗಳು ಸ್ಟಾರ್ಟ್ ಮಾಡುವ ಸ್ಥಿತಿಯಲ್ಲಿ ಇವೆಯೋ ಎಂಬ ಸಂಶಯ ಮೂಡಿದೆ. ಶೀಘ್ರವೆ ಟೆಂಡರ್ ಪೂರ್ಣಗೊಳಿಸಿ ಸದುದ್ದೇಶಕ್ಕೆ ಖರೀದಿಸಿದ ಈ ವಾಹನಗಳ ಬಳಕೆ ಸರಿಯಾದ ಸಮಯಕ್ಕೆ ಆಗಬೇಕಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ  ಹೀಗೆ?
ಮಂಗಳೂರು ಪಾಲಿಕೆಯ 153 ವಾಹನ ನಿಂತಲ್ಲೇ ತುಕ್ಕು ಹಿಡಿಯುತ್ತಿವೆ, ಹೀಗೆ ಯಾಕೆ?
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಸಾಧು ಶ್ರೀನಾಥ್​

Updated on: Dec 05, 2023 | 3:08 PM

ಮಂಗಳೂರು ನಗರ ಪಾಲಿಕೆ (Mangalore Municipal Corporation) 60 ವಾರ್ಡ್‌ಗಳನ್ನು ಒಳಗೊಂಡ ಬೃಹದಾದ ಪಾಲಿಕೆ. ಈ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು (Garbage) ಖುದ್ದು ಪಾಲಿಕೆಯೇ ವಹಿಸಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದೆ. ಇದಕ್ಕಾಗಿ 30 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿ ನಡೆದಿದೆ. ಆದ್ರೆ ಈ ವಾಹನಗಳನ್ನು ಖರೀದಿ ಮಾಡಿ ಆರು ತಿಂಗಳೇ ಕಳೆದರೂ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವಂತಾಗಿದೆ (Rusting). ಸಾಲಿನಲ್ಲಿ ನಿಲ್ಲಿಸಿರುವ ಈ ವಾಹನಗಳನ್ನು ನೋಡುವಾಗ ನಿಮಗೆ ಬಳಕೆ ಮಾಡಿರುವ ವಾಹನದಂತೆ ಕಾಣಿಸಬಹುದು. ಆದ್ರೆ ಇದು ಬಳಕೆ ಮಾಡಿರುವ ವಾಹನವಲ್ಲ. ಬದಲಾಗಿ ಶೋ ರೂಂನಿಂದ ನೇರವಾಗಿ ತಂದು ಬಳಕೆ ಮಾಡದೆ ತೆರೆದ ಪ್ರದೇಶದಲ್ಲಿ ಇಟ್ಟಿರುವುದರಿಂದ ಈ ಹೊಸ ವಾಹನಗಳು ಹಳೆ ವಾಹನಗಳಂತಾಗಿವೆ. ತ್ಯಾಜ್ಯ ವಿಲೇವಾರಿಗೆ ಬಳಸುವ ಈ ವಾಹನಗಳು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿರೋದು.

ಮಂಗಳೂರು sಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿ 30 ಕೋಟಿ ರೂ ವೆಚ್ಚದಲ್ಲಿ ಈ ವಾಹನಗಳನ್ನು ಖರೀದಿ ಮಾಡಲಾಗಿದೆ. 107 ಸಣ್ಣ ವೆಹಿಕಲ್, 30 ಟಿಪ್ಪರ್, 16 ಕಾಂಪ್ಯಾಕ್ಟರ್ ಸೇರಿದಂತೆ 153 ಈ ನೂತನ ವಾಹನಗಳನ್ನು ಖರೀದಿಸಿ ಆರು ತಿಂಗಳು ಕಳೆದಿದೆ. ಆದ್ರೆ ಈ ವಾಹನಗಳಿಗೆ ಡ್ರೈವರ್, ಲೋಡರ್ ಕೆಲಸ, ವರ್ಕ್‌ಶಾಪ್ ಹಾಗೂ ಮೂರು ವರ್ಷದ ನಿರ್ವಹಣೆಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆ ತಡವಾಗಿರುವ ಹಿನ್ನೆಲೆಯಲ್ಲಿ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವ ಪರಿಸ್ಥಿತಿ ಎದುರಾಗಿದೆ ಎನುತ್ತಾರೆ ಎ.ಸಿ ವಿನಯ್‌ರಾಜ್, ಪಾಲಿಕೆ ಸದಸ್ಯ-ಮಂಗಳೂರು ಮಹಾನಗರ ಪಾಲಿಕೆ.

ಕಳೆದ ಏಳು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು ಆ್ಯಂಟನಿ ಹೆಸರಿನ ಖಾಸಗಿ ಸಂಸ್ಥೆ ವಹಿಸಿಕೊಂಡಿತ್ತು. ಆದ್ರೆ ಈ ಸಂಸ್ಥೆಯ ಟೆಂಡರ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಆ್ಯಂಟನಿ ಸಂಸ್ಥೆಯ ಬದಲು ಮಹಾನಗರ ಪಾಲಿಕೆಯೇ ಸ್ವತಃ ತ್ಯಾಜ್ಯ ವಿಲೇವಾರಿ ಮಾಡಲು ಯೋಜನೆ ಹಾಕಿಕೊಂಡಿದೆ.

ಇದಕ್ಕಾಗಿಯೇ ಈ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಪ್ರಸ್ತುತ ಬಿಜೆಪಿ ಆಡಳಿತದ ಅವಧಿಯಲ್ಲಿ ಖರೀದಿಸಲಾಗಿದೆ. ಆದ್ರೆ ಈ ವಾಹನಗಳ ನಿರ್ವಹಣೆಯ ಟೆಂಡರ್‌ ಕರೆಯುವ ವಿಚಾರದಲ್ಲಿ ಗೊಂದಲ ಉಂಟಾಗಿರುವುದರಿಂದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದೆ. ಈ ವಿಚಾರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಯೂ ಚರ್ಚೆಯಾಗಿದ್ದು ವಿಪಕ್ಷ ಸದಸ್ಯರು ಶೀಘ್ರ ಈ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಆಯಾ ವಲಯದಲ್ಲಿ ಈ ವಾಹನಗಳನ್ನು ನಿಲ್ಲಿಸುವ ವ್ಯವಸ್ಥೆ ಸೇರಿದಂತೆ ನಿರ್ವಹಣೆಗೆ ಬೇಕಾದ ಕ್ರಮ ಕೈಗೊಳ್ಳುವುದಾಗಿ ಮೇಯರ್ ತಿಳಿಸಿದ್ದಾರೆ.

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ