AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ ಹೀಗೆ?

ಆರು ತಿಂಗಳಿನಿಂದ ನಗರದ ಮಣ್ಣಗುಡ್ಡ ಹಾಗೂ ಬೈಕಂಪಾಡಿ ಪ್ರದೇಶದಲ್ಲಿ ಮಂಗಳೂರು ನಗರ ಪಾಲಿಕೆಯ ಈ ವಾಹನಗಳು ನಿಂತಲ್ಲೇ ನಿಂತಿವೆ. ವಾಹನಗಳು ಸ್ಟಾರ್ಟ್ ಮಾಡುವ ಸ್ಥಿತಿಯಲ್ಲಿ ಇವೆಯೋ ಎಂಬ ಸಂಶಯ ಮೂಡಿದೆ. ಶೀಘ್ರವೆ ಟೆಂಡರ್ ಪೂರ್ಣಗೊಳಿಸಿ ಸದುದ್ದೇಶಕ್ಕೆ ಖರೀದಿಸಿದ ಈ ವಾಹನಗಳ ಬಳಕೆ ಸರಿಯಾದ ಸಮಯಕ್ಕೆ ಆಗಬೇಕಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ  ಹೀಗೆ?
ಮಂಗಳೂರು ಪಾಲಿಕೆಯ 153 ವಾಹನ ನಿಂತಲ್ಲೇ ತುಕ್ಕು ಹಿಡಿಯುತ್ತಿವೆ, ಹೀಗೆ ಯಾಕೆ?
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Dec 05, 2023 | 3:08 PM

Share

ಮಂಗಳೂರು ನಗರ ಪಾಲಿಕೆ (Mangalore Municipal Corporation) 60 ವಾರ್ಡ್‌ಗಳನ್ನು ಒಳಗೊಂಡ ಬೃಹದಾದ ಪಾಲಿಕೆ. ಈ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು (Garbage) ಖುದ್ದು ಪಾಲಿಕೆಯೇ ವಹಿಸಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದೆ. ಇದಕ್ಕಾಗಿ 30 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿ ನಡೆದಿದೆ. ಆದ್ರೆ ಈ ವಾಹನಗಳನ್ನು ಖರೀದಿ ಮಾಡಿ ಆರು ತಿಂಗಳೇ ಕಳೆದರೂ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವಂತಾಗಿದೆ (Rusting). ಸಾಲಿನಲ್ಲಿ ನಿಲ್ಲಿಸಿರುವ ಈ ವಾಹನಗಳನ್ನು ನೋಡುವಾಗ ನಿಮಗೆ ಬಳಕೆ ಮಾಡಿರುವ ವಾಹನದಂತೆ ಕಾಣಿಸಬಹುದು. ಆದ್ರೆ ಇದು ಬಳಕೆ ಮಾಡಿರುವ ವಾಹನವಲ್ಲ. ಬದಲಾಗಿ ಶೋ ರೂಂನಿಂದ ನೇರವಾಗಿ ತಂದು ಬಳಕೆ ಮಾಡದೆ ತೆರೆದ ಪ್ರದೇಶದಲ್ಲಿ ಇಟ್ಟಿರುವುದರಿಂದ ಈ ಹೊಸ ವಾಹನಗಳು ಹಳೆ ವಾಹನಗಳಂತಾಗಿವೆ. ತ್ಯಾಜ್ಯ ವಿಲೇವಾರಿಗೆ ಬಳಸುವ ಈ ವಾಹನಗಳು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿರೋದು.

ಮಂಗಳೂರು sಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿ 30 ಕೋಟಿ ರೂ ವೆಚ್ಚದಲ್ಲಿ ಈ ವಾಹನಗಳನ್ನು ಖರೀದಿ ಮಾಡಲಾಗಿದೆ. 107 ಸಣ್ಣ ವೆಹಿಕಲ್, 30 ಟಿಪ್ಪರ್, 16 ಕಾಂಪ್ಯಾಕ್ಟರ್ ಸೇರಿದಂತೆ 153 ಈ ನೂತನ ವಾಹನಗಳನ್ನು ಖರೀದಿಸಿ ಆರು ತಿಂಗಳು ಕಳೆದಿದೆ. ಆದ್ರೆ ಈ ವಾಹನಗಳಿಗೆ ಡ್ರೈವರ್, ಲೋಡರ್ ಕೆಲಸ, ವರ್ಕ್‌ಶಾಪ್ ಹಾಗೂ ಮೂರು ವರ್ಷದ ನಿರ್ವಹಣೆಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆ ತಡವಾಗಿರುವ ಹಿನ್ನೆಲೆಯಲ್ಲಿ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವ ಪರಿಸ್ಥಿತಿ ಎದುರಾಗಿದೆ ಎನುತ್ತಾರೆ ಎ.ಸಿ ವಿನಯ್‌ರಾಜ್, ಪಾಲಿಕೆ ಸದಸ್ಯ-ಮಂಗಳೂರು ಮಹಾನಗರ ಪಾಲಿಕೆ.

ಕಳೆದ ಏಳು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು ಆ್ಯಂಟನಿ ಹೆಸರಿನ ಖಾಸಗಿ ಸಂಸ್ಥೆ ವಹಿಸಿಕೊಂಡಿತ್ತು. ಆದ್ರೆ ಈ ಸಂಸ್ಥೆಯ ಟೆಂಡರ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಆ್ಯಂಟನಿ ಸಂಸ್ಥೆಯ ಬದಲು ಮಹಾನಗರ ಪಾಲಿಕೆಯೇ ಸ್ವತಃ ತ್ಯಾಜ್ಯ ವಿಲೇವಾರಿ ಮಾಡಲು ಯೋಜನೆ ಹಾಕಿಕೊಂಡಿದೆ.

ಇದಕ್ಕಾಗಿಯೇ ಈ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಪ್ರಸ್ತುತ ಬಿಜೆಪಿ ಆಡಳಿತದ ಅವಧಿಯಲ್ಲಿ ಖರೀದಿಸಲಾಗಿದೆ. ಆದ್ರೆ ಈ ವಾಹನಗಳ ನಿರ್ವಹಣೆಯ ಟೆಂಡರ್‌ ಕರೆಯುವ ವಿಚಾರದಲ್ಲಿ ಗೊಂದಲ ಉಂಟಾಗಿರುವುದರಿಂದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದೆ. ಈ ವಿಚಾರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಯೂ ಚರ್ಚೆಯಾಗಿದ್ದು ವಿಪಕ್ಷ ಸದಸ್ಯರು ಶೀಘ್ರ ಈ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಆಯಾ ವಲಯದಲ್ಲಿ ಈ ವಾಹನಗಳನ್ನು ನಿಲ್ಲಿಸುವ ವ್ಯವಸ್ಥೆ ಸೇರಿದಂತೆ ನಿರ್ವಹಣೆಗೆ ಬೇಕಾದ ಕ್ರಮ ಕೈಗೊಳ್ಳುವುದಾಗಿ ಮೇಯರ್ ತಿಳಿಸಿದ್ದಾರೆ.

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ