ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ ಹೀಗೆ?

ಆರು ತಿಂಗಳಿನಿಂದ ನಗರದ ಮಣ್ಣಗುಡ್ಡ ಹಾಗೂ ಬೈಕಂಪಾಡಿ ಪ್ರದೇಶದಲ್ಲಿ ಮಂಗಳೂರು ನಗರ ಪಾಲಿಕೆಯ ಈ ವಾಹನಗಳು ನಿಂತಲ್ಲೇ ನಿಂತಿವೆ. ವಾಹನಗಳು ಸ್ಟಾರ್ಟ್ ಮಾಡುವ ಸ್ಥಿತಿಯಲ್ಲಿ ಇವೆಯೋ ಎಂಬ ಸಂಶಯ ಮೂಡಿದೆ. ಶೀಘ್ರವೆ ಟೆಂಡರ್ ಪೂರ್ಣಗೊಳಿಸಿ ಸದುದ್ದೇಶಕ್ಕೆ ಖರೀದಿಸಿದ ಈ ವಾಹನಗಳ ಬಳಕೆ ಸರಿಯಾದ ಸಮಯಕ್ಕೆ ಆಗಬೇಕಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ 153 ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ, ಯಾಕೆ  ಹೀಗೆ?
ಮಂಗಳೂರು ಪಾಲಿಕೆಯ 153 ವಾಹನ ನಿಂತಲ್ಲೇ ತುಕ್ಕು ಹಿಡಿಯುತ್ತಿವೆ, ಹೀಗೆ ಯಾಕೆ?
Follow us
| Updated By: ಸಾಧು ಶ್ರೀನಾಥ್​

Updated on: Dec 05, 2023 | 3:08 PM

ಮಂಗಳೂರು ನಗರ ಪಾಲಿಕೆ (Mangalore Municipal Corporation) 60 ವಾರ್ಡ್‌ಗಳನ್ನು ಒಳಗೊಂಡ ಬೃಹದಾದ ಪಾಲಿಕೆ. ಈ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು (Garbage) ಖುದ್ದು ಪಾಲಿಕೆಯೇ ವಹಿಸಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದೆ. ಇದಕ್ಕಾಗಿ 30 ಕೋಟಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿ ನಡೆದಿದೆ. ಆದ್ರೆ ಈ ವಾಹನಗಳನ್ನು ಖರೀದಿ ಮಾಡಿ ಆರು ತಿಂಗಳೇ ಕಳೆದರೂ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವಂತಾಗಿದೆ (Rusting). ಸಾಲಿನಲ್ಲಿ ನಿಲ್ಲಿಸಿರುವ ಈ ವಾಹನಗಳನ್ನು ನೋಡುವಾಗ ನಿಮಗೆ ಬಳಕೆ ಮಾಡಿರುವ ವಾಹನದಂತೆ ಕಾಣಿಸಬಹುದು. ಆದ್ರೆ ಇದು ಬಳಕೆ ಮಾಡಿರುವ ವಾಹನವಲ್ಲ. ಬದಲಾಗಿ ಶೋ ರೂಂನಿಂದ ನೇರವಾಗಿ ತಂದು ಬಳಕೆ ಮಾಡದೆ ತೆರೆದ ಪ್ರದೇಶದಲ್ಲಿ ಇಟ್ಟಿರುವುದರಿಂದ ಈ ಹೊಸ ವಾಹನಗಳು ಹಳೆ ವಾಹನಗಳಂತಾಗಿವೆ. ತ್ಯಾಜ್ಯ ವಿಲೇವಾರಿಗೆ ಬಳಸುವ ಈ ವಾಹನಗಳು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿರೋದು.

ಮಂಗಳೂರು sಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿ 30 ಕೋಟಿ ರೂ ವೆಚ್ಚದಲ್ಲಿ ಈ ವಾಹನಗಳನ್ನು ಖರೀದಿ ಮಾಡಲಾಗಿದೆ. 107 ಸಣ್ಣ ವೆಹಿಕಲ್, 30 ಟಿಪ್ಪರ್, 16 ಕಾಂಪ್ಯಾಕ್ಟರ್ ಸೇರಿದಂತೆ 153 ಈ ನೂತನ ವಾಹನಗಳನ್ನು ಖರೀದಿಸಿ ಆರು ತಿಂಗಳು ಕಳೆದಿದೆ. ಆದ್ರೆ ಈ ವಾಹನಗಳಿಗೆ ಡ್ರೈವರ್, ಲೋಡರ್ ಕೆಲಸ, ವರ್ಕ್‌ಶಾಪ್ ಹಾಗೂ ಮೂರು ವರ್ಷದ ನಿರ್ವಹಣೆಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆ ತಡವಾಗಿರುವ ಹಿನ್ನೆಲೆಯಲ್ಲಿ ವಾಹನಗಳು ನಿಂತಲ್ಲೇ ನಿಂತು ತುಕ್ಕು ಹಿಡಿಯುವ ಪರಿಸ್ಥಿತಿ ಎದುರಾಗಿದೆ ಎನುತ್ತಾರೆ ಎ.ಸಿ ವಿನಯ್‌ರಾಜ್, ಪಾಲಿಕೆ ಸದಸ್ಯ-ಮಂಗಳೂರು ಮಹಾನಗರ ಪಾಲಿಕೆ.

ಕಳೆದ ಏಳು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳ ತ್ಯಾಜ್ಯ ವಿಲೇವಾರಿ ಹೊಣೆಯನ್ನು ಆ್ಯಂಟನಿ ಹೆಸರಿನ ಖಾಸಗಿ ಸಂಸ್ಥೆ ವಹಿಸಿಕೊಂಡಿತ್ತು. ಆದ್ರೆ ಈ ಸಂಸ್ಥೆಯ ಟೆಂಡರ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಆ್ಯಂಟನಿ ಸಂಸ್ಥೆಯ ಬದಲು ಮಹಾನಗರ ಪಾಲಿಕೆಯೇ ಸ್ವತಃ ತ್ಯಾಜ್ಯ ವಿಲೇವಾರಿ ಮಾಡಲು ಯೋಜನೆ ಹಾಕಿಕೊಂಡಿದೆ.

ಇದಕ್ಕಾಗಿಯೇ ಈ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಪ್ರಸ್ತುತ ಬಿಜೆಪಿ ಆಡಳಿತದ ಅವಧಿಯಲ್ಲಿ ಖರೀದಿಸಲಾಗಿದೆ. ಆದ್ರೆ ಈ ವಾಹನಗಳ ನಿರ್ವಹಣೆಯ ಟೆಂಡರ್‌ ಕರೆಯುವ ವಿಚಾರದಲ್ಲಿ ಗೊಂದಲ ಉಂಟಾಗಿರುವುದರಿಂದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದೆ. ಈ ವಿಚಾರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಯೂ ಚರ್ಚೆಯಾಗಿದ್ದು ವಿಪಕ್ಷ ಸದಸ್ಯರು ಶೀಘ್ರ ಈ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಆಯಾ ವಲಯದಲ್ಲಿ ಈ ವಾಹನಗಳನ್ನು ನಿಲ್ಲಿಸುವ ವ್ಯವಸ್ಥೆ ಸೇರಿದಂತೆ ನಿರ್ವಹಣೆಗೆ ಬೇಕಾದ ಕ್ರಮ ಕೈಗೊಳ್ಳುವುದಾಗಿ ಮೇಯರ್ ತಿಳಿಸಿದ್ದಾರೆ.

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್