AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 24 ಅಡಿ ಬಾವಿ ತೋಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ 17 ವರ್ಷದ ಬಾಲಕ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೈಲಾ ಗ್ರಾಮದ 17 ವರ್ಷದ ಬಾಲಕ 24 ಅಡಿ ಆಳದ ಬಾವಿ ತೋಡಿದ್ದಾನೆ.

ಮಂಗಳೂರು: 24 ಅಡಿ ಬಾವಿ ತೋಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ 17 ವರ್ಷದ ಬಾಲಕ
ಬಾಲಕ ಸಾಜ್ರನ್​​Image Credit source: Times of India
ವಿವೇಕ ಬಿರಾದಾರ
|

Updated on:Apr 12, 2023 | 3:24 PM

Share

ಮಂಗಳೂರು: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ನೈಲಾ ಗ್ರಾಮದ 17 ವರ್ಷದ ಬಾಲಕ 24 ಅಡಿ ಆಳದ ಬಾವಿಯನ್ನು (Well) ತೋಡಿದ್ದಾನೆ. ಹೌದು ಬಾಲಕ ಸ್ರಾಜನ್ ತನ್ನ ಊರಿನ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ನಿಟ್ಟಿನಲ್ಲಿ ಈ ಮಾರ್ಗವನ್ನು ಅನುಸರಿಸಿದ್ದಾರೆ. ಸ್ರಾಜನ್​ನ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೈಲಾ ಗ್ರಾಮದ ಟೈಲರ್ ಲೋಕನಾಥ್ ಮತ್ತು ಬೀಡಿ ಸುತ್ತುವ ಕೆಲಸ ಮಾಡುವ ಮೋಹಿನಿ ಅವರ ಪುತ್ರ ಸ್ರಾಜನ್ ​ ಸರ್ಕಾರಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದಾರೆ.

ಗ್ರಾಮದಲ್ಲಿ ನೀರಿನ ಸಮಸ್ಯೆ ಅಧಿಕವಾಗಿದೆ. ಇದನ್ನು ಬಗೆಹರಿಸಬೇಕೆಂದು ಬಾವಿ ತೋಡಲು ಬಯಸಿದ್ದೆ. ಗ್ರಾಮಕ್ಕೆ ಪಂಚಾಯತಿ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ ಆದರೂ ಕೂಡ ನೀರಿನ ಸಮಸ್ಯೆ ಅಧಿಕವಾಗಿದೆ ಎಂದು ಸ್ರಾಜನ್ ​ ಹೇಳಿದರು.

“ಬಾವಿ ತೋಡುವುದು ನನ್ನ ಮನಸ್ಸಿನಲ್ಲಿತ್ತು, ಆದರೆ ನಾನು ಯಶಸ್ವಿಯಾಗುತ್ತೇನೆಯೇ ಎಂದು ನನಗೆ ಖಚಿತವಾಗಿರಲಿಲ್ಲ. ಕೆಲಸ ಕಷ್ಟಕರವಾಗಿತ್ತು, ಆದರೆ ಅದು ಅಸಾಧ್ಯವಲ್ಲ ಎಂದು ನನಗೆ ತಿಳಿದಿತ್ತು. ಎರಡು ವಾರಗಳ ಹಿಂದೆ ಬಾವಿ ತೋಡಲು ಆರಂಭಿಸಬೇಕೆಂದು ಯೋಚಿಸಿದಾಗಸುಮಾರು 15-16 ಅಡಿಯಲ್ಲಿ ನೀರು ಸಿಗಬಹುದು ಎಂದು ಯೋಚಿಸಿದ್ದೆ, ಅದು ನಿಜವಾಯಿತು. ನಾನು ಬಾವಿ ತೋಡುತ್ತಾ 15-16 ಅಡಿ ತಲುಪಿದಾಗ ನೀರು ದೊರೆಯಿತು ಇದರಿಂದ ಅತೀವ ಆನಂದವಾಯಿತು. ನನ್ನ ಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ ಎಂದು ನನ್ನ ಮನೆಯವರೂ ಖುಷಿ ಪಟ್ಟರು. ಇದು ನನ್ನನ್ನು ಮತ್ತಷ್ಟು ಅಗೆಯಲು ಪ್ರೇರೇಪಿಸಿತು” ಈ ಹಿನ್ನೆಲೆ ನಾನು 24 ಅಡಿ ಬಾವಿ ತೋಡಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 12 April 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ