AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 24 ಅಡಿ ಬಾವಿ ತೋಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ 17 ವರ್ಷದ ಬಾಲಕ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೈಲಾ ಗ್ರಾಮದ 17 ವರ್ಷದ ಬಾಲಕ 24 ಅಡಿ ಆಳದ ಬಾವಿ ತೋಡಿದ್ದಾನೆ.

ಮಂಗಳೂರು: 24 ಅಡಿ ಬಾವಿ ತೋಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ 17 ವರ್ಷದ ಬಾಲಕ
ಬಾಲಕ ಸಾಜ್ರನ್​​Image Credit source: Times of India
Follow us
ವಿವೇಕ ಬಿರಾದಾರ
|

Updated on:Apr 12, 2023 | 3:24 PM

ಮಂಗಳೂರು: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ನೈಲಾ ಗ್ರಾಮದ 17 ವರ್ಷದ ಬಾಲಕ 24 ಅಡಿ ಆಳದ ಬಾವಿಯನ್ನು (Well) ತೋಡಿದ್ದಾನೆ. ಹೌದು ಬಾಲಕ ಸ್ರಾಜನ್ ತನ್ನ ಊರಿನ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ನಿಟ್ಟಿನಲ್ಲಿ ಈ ಮಾರ್ಗವನ್ನು ಅನುಸರಿಸಿದ್ದಾರೆ. ಸ್ರಾಜನ್​ನ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೈಲಾ ಗ್ರಾಮದ ಟೈಲರ್ ಲೋಕನಾಥ್ ಮತ್ತು ಬೀಡಿ ಸುತ್ತುವ ಕೆಲಸ ಮಾಡುವ ಮೋಹಿನಿ ಅವರ ಪುತ್ರ ಸ್ರಾಜನ್ ​ ಸರ್ಕಾರಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದಾರೆ.

ಗ್ರಾಮದಲ್ಲಿ ನೀರಿನ ಸಮಸ್ಯೆ ಅಧಿಕವಾಗಿದೆ. ಇದನ್ನು ಬಗೆಹರಿಸಬೇಕೆಂದು ಬಾವಿ ತೋಡಲು ಬಯಸಿದ್ದೆ. ಗ್ರಾಮಕ್ಕೆ ಪಂಚಾಯತಿ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ ಆದರೂ ಕೂಡ ನೀರಿನ ಸಮಸ್ಯೆ ಅಧಿಕವಾಗಿದೆ ಎಂದು ಸ್ರಾಜನ್ ​ ಹೇಳಿದರು.

“ಬಾವಿ ತೋಡುವುದು ನನ್ನ ಮನಸ್ಸಿನಲ್ಲಿತ್ತು, ಆದರೆ ನಾನು ಯಶಸ್ವಿಯಾಗುತ್ತೇನೆಯೇ ಎಂದು ನನಗೆ ಖಚಿತವಾಗಿರಲಿಲ್ಲ. ಕೆಲಸ ಕಷ್ಟಕರವಾಗಿತ್ತು, ಆದರೆ ಅದು ಅಸಾಧ್ಯವಲ್ಲ ಎಂದು ನನಗೆ ತಿಳಿದಿತ್ತು. ಎರಡು ವಾರಗಳ ಹಿಂದೆ ಬಾವಿ ತೋಡಲು ಆರಂಭಿಸಬೇಕೆಂದು ಯೋಚಿಸಿದಾಗಸುಮಾರು 15-16 ಅಡಿಯಲ್ಲಿ ನೀರು ಸಿಗಬಹುದು ಎಂದು ಯೋಚಿಸಿದ್ದೆ, ಅದು ನಿಜವಾಯಿತು. ನಾನು ಬಾವಿ ತೋಡುತ್ತಾ 15-16 ಅಡಿ ತಲುಪಿದಾಗ ನೀರು ದೊರೆಯಿತು ಇದರಿಂದ ಅತೀವ ಆನಂದವಾಯಿತು. ನನ್ನ ಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ ಎಂದು ನನ್ನ ಮನೆಯವರೂ ಖುಷಿ ಪಟ್ಟರು. ಇದು ನನ್ನನ್ನು ಮತ್ತಷ್ಟು ಅಗೆಯಲು ಪ್ರೇರೇಪಿಸಿತು” ಈ ಹಿನ್ನೆಲೆ ನಾನು 24 ಅಡಿ ಬಾವಿ ತೋಡಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 12 April 23

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ