AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 24 ಅಡಿ ಬಾವಿ ತೋಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ 17 ವರ್ಷದ ಬಾಲಕ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೈಲಾ ಗ್ರಾಮದ 17 ವರ್ಷದ ಬಾಲಕ 24 ಅಡಿ ಆಳದ ಬಾವಿ ತೋಡಿದ್ದಾನೆ.

ಮಂಗಳೂರು: 24 ಅಡಿ ಬಾವಿ ತೋಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡ 17 ವರ್ಷದ ಬಾಲಕ
ಬಾಲಕ ಸಾಜ್ರನ್​​Image Credit source: Times of India
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 12, 2023 | 3:24 PM

Share

ಮಂಗಳೂರು: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ನೈಲಾ ಗ್ರಾಮದ 17 ವರ್ಷದ ಬಾಲಕ 24 ಅಡಿ ಆಳದ ಬಾವಿಯನ್ನು (Well) ತೋಡಿದ್ದಾನೆ. ಹೌದು ಬಾಲಕ ಸ್ರಾಜನ್ ತನ್ನ ಊರಿನ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ನಿಟ್ಟಿನಲ್ಲಿ ಈ ಮಾರ್ಗವನ್ನು ಅನುಸರಿಸಿದ್ದಾರೆ. ಸ್ರಾಜನ್​ನ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೈಲಾ ಗ್ರಾಮದ ಟೈಲರ್ ಲೋಕನಾಥ್ ಮತ್ತು ಬೀಡಿ ಸುತ್ತುವ ಕೆಲಸ ಮಾಡುವ ಮೋಹಿನಿ ಅವರ ಪುತ್ರ ಸ್ರಾಜನ್ ​ ಸರ್ಕಾರಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದಾರೆ.

ಗ್ರಾಮದಲ್ಲಿ ನೀರಿನ ಸಮಸ್ಯೆ ಅಧಿಕವಾಗಿದೆ. ಇದನ್ನು ಬಗೆಹರಿಸಬೇಕೆಂದು ಬಾವಿ ತೋಡಲು ಬಯಸಿದ್ದೆ. ಗ್ರಾಮಕ್ಕೆ ಪಂಚಾಯತಿ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ ಆದರೂ ಕೂಡ ನೀರಿನ ಸಮಸ್ಯೆ ಅಧಿಕವಾಗಿದೆ ಎಂದು ಸ್ರಾಜನ್ ​ ಹೇಳಿದರು.

“ಬಾವಿ ತೋಡುವುದು ನನ್ನ ಮನಸ್ಸಿನಲ್ಲಿತ್ತು, ಆದರೆ ನಾನು ಯಶಸ್ವಿಯಾಗುತ್ತೇನೆಯೇ ಎಂದು ನನಗೆ ಖಚಿತವಾಗಿರಲಿಲ್ಲ. ಕೆಲಸ ಕಷ್ಟಕರವಾಗಿತ್ತು, ಆದರೆ ಅದು ಅಸಾಧ್ಯವಲ್ಲ ಎಂದು ನನಗೆ ತಿಳಿದಿತ್ತು. ಎರಡು ವಾರಗಳ ಹಿಂದೆ ಬಾವಿ ತೋಡಲು ಆರಂಭಿಸಬೇಕೆಂದು ಯೋಚಿಸಿದಾಗಸುಮಾರು 15-16 ಅಡಿಯಲ್ಲಿ ನೀರು ಸಿಗಬಹುದು ಎಂದು ಯೋಚಿಸಿದ್ದೆ, ಅದು ನಿಜವಾಯಿತು. ನಾನು ಬಾವಿ ತೋಡುತ್ತಾ 15-16 ಅಡಿ ತಲುಪಿದಾಗ ನೀರು ದೊರೆಯಿತು ಇದರಿಂದ ಅತೀವ ಆನಂದವಾಯಿತು. ನನ್ನ ಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ ಎಂದು ನನ್ನ ಮನೆಯವರೂ ಖುಷಿ ಪಟ್ಟರು. ಇದು ನನ್ನನ್ನು ಮತ್ತಷ್ಟು ಅಗೆಯಲು ಪ್ರೇರೇಪಿಸಿತು” ಈ ಹಿನ್ನೆಲೆ ನಾನು 24 ಅಡಿ ಬಾವಿ ತೋಡಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 12 April 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ