AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 17, 2022 | 3:20 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ರೈಲ್ವೇ(Railway) ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು(Railway Stations) ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ(Works) ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್​ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16575/16576) ಮಾರ್ಚ್​.17 ರಿಂದ ಇರುವುದಿಲ್ಲ. ಯವಂತಪುರ-ಮಂಗಳೂರು ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್(16595/16596), ಯಶವಂತಪುರ-ಕಣ್ಣೂರು ಎಕ್ಸ್‌ಪ್ರೆಸ್(16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ಗುರುವಾರದಿಂದ ರೈಲು ಸಂಚಾರ ರದ್ದಾಗುವ ಬಗ್ಗೆ ಬುಧವಾರ ಸಂಜೆ ಪ್ರಕಟಣೆ ಹೊರಡಿಸಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೇಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಯುದ್ಧನಾಡು ಉಕ್ರೇನ್​ನ ಎಲ್ವಿವ್ ರೈಲ್ವೇ ನಿಲ್ದಾಣದ ಹೊರಗೆ ಕುಳಿತು ಪಿಯಾನೋ ನುಡಿಸಿದ ಯುವತಿ: ವಿಡಿಯೋ ವೈರಲ್​

Published On - 2:57 pm, Thu, 17 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ