AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 17, 2022 | 3:20 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ರೈಲ್ವೇ(Railway) ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು(Railway Stations) ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ(Works) ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್​ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16575/16576) ಮಾರ್ಚ್​.17 ರಿಂದ ಇರುವುದಿಲ್ಲ. ಯವಂತಪುರ-ಮಂಗಳೂರು ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್(16595/16596), ಯಶವಂತಪುರ-ಕಣ್ಣೂರು ಎಕ್ಸ್‌ಪ್ರೆಸ್(16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ಗುರುವಾರದಿಂದ ರೈಲು ಸಂಚಾರ ರದ್ದಾಗುವ ಬಗ್ಗೆ ಬುಧವಾರ ಸಂಜೆ ಪ್ರಕಟಣೆ ಹೊರಡಿಸಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೇಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಯುದ್ಧನಾಡು ಉಕ್ರೇನ್​ನ ಎಲ್ವಿವ್ ರೈಲ್ವೇ ನಿಲ್ದಾಣದ ಹೊರಗೆ ಕುಳಿತು ಪಿಯಾನೋ ನುಡಿಸಿದ ಯುವತಿ: ವಿಡಿಯೋ ವೈರಲ್​

Published On - 2:57 pm, Thu, 17 March 22

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ