AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ.

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ; ಇಂದಿನಿಂದ ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 17, 2022 | 3:20 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ರೈಲ್ವೇ(Railway) ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು(Railway Stations) ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ(Works) ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್​ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16575/16576) ಮಾರ್ಚ್​.17 ರಿಂದ ಇರುವುದಿಲ್ಲ. ಯವಂತಪುರ-ಮಂಗಳೂರು ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್(16595/16596), ಯಶವಂತಪುರ-ಕಣ್ಣೂರು ಎಕ್ಸ್‌ಪ್ರೆಸ್(16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ಗುರುವಾರದಿಂದ ರೈಲು ಸಂಚಾರ ರದ್ದಾಗುವ ಬಗ್ಗೆ ಬುಧವಾರ ಸಂಜೆ ಪ್ರಕಟಣೆ ಹೊರಡಿಸಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೇಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಯುದ್ಧನಾಡು ಉಕ್ರೇನ್​ನ ಎಲ್ವಿವ್ ರೈಲ್ವೇ ನಿಲ್ದಾಣದ ಹೊರಗೆ ಕುಳಿತು ಪಿಯಾನೋ ನುಡಿಸಿದ ಯುವತಿ: ವಿಡಿಯೋ ವೈರಲ್​

Published On - 2:57 pm, Thu, 17 March 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು