AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಗೃಹ ಪ್ರವೇಶ ಮಾಡಿದ ಐದೇ ದಿನದಲ್ಲಿ ಅದೇ ಮನೆಯಲ್ಲಿ ದುರಂತ ಅಂತ್ಯಕಂಡ ಯುವತಿ

ಹೊಸ ಮನೆಗೆ ಹೋದ ಐದೇ ದಿನದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು 24 ಪುಟಗಳ ಡೆತ್​ ನೋಟ್​ ಪತ್ತೆಯಾಗಿದೆ.

Mangaluru News: ಗೃಹ ಪ್ರವೇಶ ಮಾಡಿದ ಐದೇ ದಿನದಲ್ಲಿ ಅದೇ ಮನೆಯಲ್ಲಿ ದುರಂತ ಅಂತ್ಯಕಂಡ ಯುವತಿ
ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ.
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 3:24 PM

Share

ಮಂಗಳೂರು: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ. ಕುಂಪಲದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು, ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಗೃಹ ಪ್ರವೇಶವಾದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣಿಗೆ ಶರಣಾಗಿರುವುದು ದುರಂತ

ಆತ್ಮಹತ್ಯೆಗೂ ಮುನ್ನ ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಇದೀಗ ಗೃಹ ಪ್ರವೇಶವಾದ ಐದೇ ದಿನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಬವಾಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಪೊಲೀಸರು, ಡೆತ್​ ನೋಟ್​ ಮೂಲಕ ತನಿಖೆ ನಡೆಸಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ