Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸರು ಕಳೆದ ಒಂದು ವಾರದಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 18, 2023 | 7:41 AM

ಮಂಗಳೂರು ನ.18: ಕಳೆದ ಒಂದು ವಾರದಲ್ಲಿ ನಗರ ಪೊಲೀಸರು (Mangaluru Police) ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ (NDPS) ಕಾಯ್ದೆಯಡಿ 42 ಪ್ರಕರಣಗಳನ್ನುದಾಖಲಿಸಿಕೊಂಡಿದ್ದಾರೆ. ನವೆಂಬರ್ 6 ರಿಂದ 12 ರವರೆಗೆ ಪೊಲೀಸರು 23,550 ಮೌಲ್ಯದ 1 ಕೆಜಿ ಗಾಂಜಾ ಮತ್ತು 2.7 ಲಕ್ಷ ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಮಾದಕ ದ್ರವ್ಯ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 13 ಜನರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಆನ್‌ಲೈನ್ ವಂಚನೆಯಲ್ಲಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ಆನ್‌ಲೈನ್ ವಂಚನೆಯಲ್ಲಿ ಮಹಿಳೆಯೊಬ್ಬರು 6.9 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಯೂಟ್ಯೂಬ್‌ನಲ್ಲಿ ಜಾಹೀರಾತನ್ನು ನೋಡಿದರು. ಅಲ್ಲಿ ಸೂಚಿಸಲಾಗಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ವಂಚಕನ ಟೆಲಿಗ್ರಾಮ್ ಮೆಸೆಂಜರ್ ಅಪ್ಲಿಕೇಶನ್‌ ಓಪನ್​ ಆಗಿದೆ. ತರಬೇತಿ ಬೋಧಕ (@kaiyun 0660) ಹೆಸರಿನಲ್ಲಿ ಖಾತೆಯನ್ನು ತೆರೆಯಲಾಗಿದೆ. ನಂತರ ವಂಚಕ ಹೇಳುವ ಹಂತಗಳನ್ನು ಮಹಿಳೆ ಒಂದೊಂದಾಗಿ ಪೂರ್ಣಗೊಳಿಸಿದ್ದಾರೆ. ಇದರಿಂದ ಮಹಿಳೆ ಐದು ಬ್ಯಾಂಕ್ ಖಾತೆಗಳಿಂದ ನವೆಂಬರ್ 1 ಮತ್ತು 7 ರ ನಡುವೆ 6.9 ಲಕ್ಷ ರೂ. ಕಳೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 18 November 23

ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ