AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸರು ಕಳೆದ ಒಂದು ವಾರದಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 18, 2023 | 7:41 AM

Share

ಮಂಗಳೂರು ನ.18: ಕಳೆದ ಒಂದು ವಾರದಲ್ಲಿ ನಗರ ಪೊಲೀಸರು (Mangaluru Police) ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ (NDPS) ಕಾಯ್ದೆಯಡಿ 42 ಪ್ರಕರಣಗಳನ್ನುದಾಖಲಿಸಿಕೊಂಡಿದ್ದಾರೆ. ನವೆಂಬರ್ 6 ರಿಂದ 12 ರವರೆಗೆ ಪೊಲೀಸರು 23,550 ಮೌಲ್ಯದ 1 ಕೆಜಿ ಗಾಂಜಾ ಮತ್ತು 2.7 ಲಕ್ಷ ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಮಾದಕ ದ್ರವ್ಯ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 13 ಜನರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಆನ್‌ಲೈನ್ ವಂಚನೆಯಲ್ಲಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ಆನ್‌ಲೈನ್ ವಂಚನೆಯಲ್ಲಿ ಮಹಿಳೆಯೊಬ್ಬರು 6.9 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಯೂಟ್ಯೂಬ್‌ನಲ್ಲಿ ಜಾಹೀರಾತನ್ನು ನೋಡಿದರು. ಅಲ್ಲಿ ಸೂಚಿಸಲಾಗಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ವಂಚಕನ ಟೆಲಿಗ್ರಾಮ್ ಮೆಸೆಂಜರ್ ಅಪ್ಲಿಕೇಶನ್‌ ಓಪನ್​ ಆಗಿದೆ. ತರಬೇತಿ ಬೋಧಕ (@kaiyun 0660) ಹೆಸರಿನಲ್ಲಿ ಖಾತೆಯನ್ನು ತೆರೆಯಲಾಗಿದೆ. ನಂತರ ವಂಚಕ ಹೇಳುವ ಹಂತಗಳನ್ನು ಮಹಿಳೆ ಒಂದೊಂದಾಗಿ ಪೂರ್ಣಗೊಳಿಸಿದ್ದಾರೆ. ಇದರಿಂದ ಮಹಿಳೆ ಐದು ಬ್ಯಾಂಕ್ ಖಾತೆಗಳಿಂದ ನವೆಂಬರ್ 1 ಮತ್ತು 7 ರ ನಡುವೆ 6.9 ಲಕ್ಷ ರೂ. ಕಳೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 18 November 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು