ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?

ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಲಾಕ್​ಡೌನ್ ವೇಳೆ ಬಾವಿ ತೆಗೆದಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು 40 ಅಡಿ ಆಳದ ಬಾವಿ ತೋಡಲಾಗಿದೆ. ಬಾವಿಯಲ್ಲಿ ನೀರು ಬಂದಿದ್ದು ಎಲ್ಲರಿಗೂ ಖುಷಿ ತರಿಸಿದೆ. ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತ್ತಿತ್ತು. ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಬಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ […]

ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?
ಸಾಧು ಶ್ರೀನಾಥ್​

Updated on: May 20, 2020 | 4:46 PM

ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಲಾಕ್​ಡೌನ್ ವೇಳೆ ಬಾವಿ ತೆಗೆದಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು 40 ಅಡಿ ಆಳದ ಬಾವಿ ತೋಡಲಾಗಿದೆ. ಬಾವಿಯಲ್ಲಿ ನೀರು ಬಂದಿದ್ದು ಎಲ್ಲರಿಗೂ ಖುಷಿ ತರಿಸಿದೆ.

ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತ್ತಿತ್ತು. ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಬಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 4:45 pm, Wed, 20 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us