AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು

ಗೋವನ್ನು ನಂಬಿ ಜೀವನ ನಡೆಸುತ್ತಿರುವ ಅದೆಷ್ಟೋ ಕುಟುಂಬಗಳು ಇಂದಿಗೂ ಇವೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದಲ್ಲಿನ ಗ್ರಾಮದಲ್ಲಿನ ಜಾನುವಾರುಗಳು ನಿಗೂಢವಾಗಿ ಸಾವಿಗೀಡಾಗುತ್ತಿವೆ. ನರಳಿ ನರಳಿ ದನಗಳು ಸಾವನ್ನಪ್ಪುತ್ತಿರುವ ದೃಶ್ಯಗಳು ಕರುಳು ಹಿಂಡುವಂತಿವೆ. ಹಾಗಾದರೆ, ಈ ಜಾನುವಾರುಗಳ ಸಾವಿಗೆ ಕಾರಣವೇನು? ದನಗಳಿಗೆ ಏನಾಗಿದೆ? ಇಲ್ಲಿದೆ ವಿವರ

ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು
ದನಗಳು
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ|

Updated on: Jun 23, 2025 | 9:58 PM

Share

ಮಂಗಳೂರು, ಜೂನ್​ 23: ಮಂಗಳೂರು (Mangaluru) ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ವಿಚಿತ್ರವಾದ ಘಟನೆಯೊಂದು ನಡೆಯುತ್ತಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆಯನ್ನೇ ಮಾಡಿಕೊಂಡು ಬಂದಿರುವ ಪ್ರಕಾಶ್ ಅವರ ದನಗಳು (Cattle) ನಿಗೂಢವಾಗಿ ಸಾವಿಗೀಡಾಗಿವೆ. ಒಟ್ಟು 37 ದನಗಳಲ್ಲಿ 7 ದನಗಳು ಮೃತಪಟ್ಟಿವೆ. ಕೆಲ ದಿನಗಳ ಹಿಂದೆ ಮನೆ ಸಮೀಪದ ಗುಡ್ಡ ಪ್ರದೇಶಕ್ಕೆ ಮೇಯಲು ಹೋಗಿದ್ದ ದನಗಳು ಅಸ್ವಸ್ಥ ಸ್ಥಿತಿಯಲ್ಲಿ ವಾಪಾಸು ಕೊಟ್ಟಿಗೆಗೆ ಬಂದಿದ್ದವು. ಮೇಯಲು ಹೋಗಿದ್ದ 12 ದನಗಳಲ್ಲಿ ಎರಡು ಗರ್ಭ ಧರಿಸಿದ್ದ ದನ ಸೇರಿದಂತೆ ಒಟ್ಟು ಏಳು ಜಾನುವಾರುಗಳು ಸಾವನ್ನಪ್ಪಿವೆ.

ಈ ಜಾನುವಾರುಗಳು ನರಳಿ ನರಳಿ ಸಾವನ್ನಪ್ಪಿದ ದೃಶ್ಯ ಕರುಳು ಹಿಂಡುವಂತಿದೆ. ದನಗಳ ಕುತ್ತಿಗೆ ವಕ್ರವಾಗಿ ಕುಸಿದು ಬೀಳುತ್ತಿದ್ದು ಆಹಾರ ಸೇವಿಸಲು ಸಾಧ್ಯವಾಗದೆ ನರಳಿ ನರಳಿ‌ ಸಾವನ್ನಪ್ಪುತ್ತಿವೆ. ಈ ಜಾನುವಾರುಗಳ ಸಾವಿಗೆ ಯಾರೋ ವಿರೋಧಿಗಳು ವಿಷಪ್ರಾಶನ ಮಾಡಿರುವ ಅನುಮಾನ ಪ್ರಕಾಶ್ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನೂರಕ್ಕೆ ನೂರು ವಿಷಪ್ರಾಶನ ಆಗಿರುವ ಸಂಶಯ ವ್ಯಕ್ತಪಡಿಸಿರುವ ಅವರು ಕೃತ್ಯ ಎಸಗಿದರಿಗೆ ಹಿಡಿಶಾಪ ಹಾಕಿದ್ದಾರೆ. ಬಹಳ ಪ್ರೀತಿಯಿಂದ ದನ ಕರುಗಳನ್ನು ನೋಡಿಕೊಳ್ಳುತ್ತಿದ್ದ ಪ್ರಕಾಶ್ ಕುಟುಂಬ ಜಾನುವಾರುಗಳ ಅಕಾಲಿಕ ಸಾವಿನಿಂದ ಆಘಾತಕ್ಕೆ ಒಳಗಾಗಿದೆ. ಇತ್ತ ತಾಯಿಯನ್ನು ಕಳೆದುಕೊಂಡು ಕರುಗಳು ತಬ್ಬಲಿಯಾಗಿವೆ. ಯಾರದ್ದೋ ದ್ವೇಷಕ್ಕೆ ಮೂಕ ಪ್ರಾಣಿಗಳು ಬಲಿಯಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಮಂಗಳೂರು: ಹಲವು ಅತ್ಯಾಚಾರ, ಕೊಲೆಯ ಶವ ಹೂತುಹಾಕಿದ್ದೆ ಎಂದ ವ್ಯಕ್ತಿ!
Image
ಮಂಗಳೂರು: ಅಪಾಯ ಆಹ್ವಾನಿಸುವ ರನ್​ವೇ, ಈಡೇರಿಲ್ಲ ವಿಸ್ತರಣೆ ಬೇಡಿಕೆ
Image
ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿ ಕೊನೆಗೂ ಅಮಾನತು
Image
ಮಂಗಳೂರು ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಂಗ್ರೆಸ್​​ ಕಾರ್ಯಕರ್ತ

ಇದನ್ನೂ ಓದಿ: ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಜಾನುವಾರುಗಳ ನಿಗೂಢವಾಗಿ ಸಾವನ್ನಪ್ಪಿದ ಸ್ಥಳಕ್ಕೆ ಪಶುಪಾಲನೆ ಇಲಾಖೆ ವೈದ್ಯರು ಭೇಟಿ ನೀಡಿ ಮೃತ ದನ ಕರುಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಸದ್ಯ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಿದ್ದು ವರದಿ ಇನ್ನಷ್ಟೇ ಕೈ ಸೇರಬೇಕಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಜಾನುವಾರುಗಳ ನಿಗೂಢ ಸಾವಿಗೆ ಕಾರಣವೇನೆಂದು ತಿಳಿಯಲಿದೆ. ಕೊಟ್ಟಿಗೆಯ ಪಕ್ಕದಲ್ಲೇ ಮೃತ ಜಾನುವಾರುಗಳ ಅಂತ್ಯಕ್ರೀಯ ಕಾರ್ಯ ನೆರವೇರಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!