ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ

ರಾಜಕಾರಣಿಗಳು ಜನರಿಂದ ಜನರಿಗಾಗಿ ಜನರಿಗೋಸ್ಕರವಾಗಿ ಇರುವುದಾಗಿ ರಾಜಕಾರಣಿಗಳ ಮಾತು. ತಮ್ಮ ವಿಚಾರ, ಕಾರ್ಯಸಾಧನೆಯ ಮೂಲಕ ವರ್ಚಸ್ಸು ಹೆಚ್ಚಿಸಿಕೊಂಡು ಸಾರ್ವಜನಿಕ ಜೀವನದಲ್ಲಿ ಮುಂದೆ ಬರಬೇಕೆನ್ನುವುದು ಕೆಲವ ರಾಜಕಾರಣಿಗಳ ಹಂಬಲ. ಆದ್ರೆ, ಇಲ್ಲೋರ್ವ ರಾಜಕೀಯ ಮುಖಂಡ ಸಾರ್ವಜನಿಕವಾಗಿಯೇ ಮಹಿಳೆಯೊಬ್ಬರಿಗೆ ತನ್ನ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ
ಪದ್ಮನಾಭ ಸಫಲ್ಯ
Edited By:

Updated on: May 12, 2025 | 3:13 PM

ಮಂಗಳೂರು, (ಮೇ 12): ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಮಹಿಳೆ ನೀಡಿದ ದೂರಿನಲ್ಲೇನಿದೆ?

ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಲೆ ತನ್ನ ಮನೆಗೆ ಬರುದ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ಧ ಕೇಳಿ ಬಂದಿದೆ. ಹೀಗಾಗಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ತನ್ನ ಚಡ್ಡಿಯನ್ನು ಕೆಳಗೆ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್​ಎಸ್​ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಿ ಕಾಮುಕ ಪರಾರಿ

ಬಿಜೆಪಿಯಿಂದ ಉಚ್ಛಾಟನೆ

ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯ ಅವರ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ಆದೇಶಿಸಿದ್ದಾರೆ.

ಇದನ್ನೂ ಓದಿ
ಬೆಂಗಳೂರು: ಮಹಿಳೆ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಕಾಮುಕ
ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ, ಕೃತ್ಯದ ವಿಡಿಯೋ ವೈರಲ್​
ಕಂಪನಿಯ ಟಾರ್ಗೆಟ್ ರೀಚ್ ಆಗದಿದ್ದಕ್ಕೆ ಸಿಬ್ಬಂದಿಗೆ ಇದೆಂಥಾ ಶಿಕ್ಷೆ
ಅಪ್ಪನ ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಆತನ ಗುಪ್ತಾಂಗ ಕತ್ತರಿಸಿದ ಮಗಳು!

ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿದ್ಯ ಕೊಡುವ ಪಕ್ಷದಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆಗೆ ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ. ಪಂಚಾಯತ್‌ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us