AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ವಿಚಾರ; ಮಂಗಳೂರಿನಲ್ಲಿ ಪ್ರಕರಣ ದಾಖಲು

ಫೇಸ್ ಬುಕ್​ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಅಂತ ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ.

ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ವಿಚಾರ; ಮಂಗಳೂರಿನಲ್ಲಿ ಪ್ರಕರಣ ದಾಖಲು
ಜನರಲ್ ಬಿಪಿನ್ ರಾವತ್
TV9 Web
| Edited By: |

Updated on:Dec 11, 2021 | 1:07 PM

Share

ಮಂಗಳೂರು: ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಪ್ರಕರಣ ದಾಖಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ 3 ಫೇಸ್​ಬುಕ್​ ಪೋಸ್ಟ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಇವರಲ್ಲಿ ಒಬ್ಬರು ಕಾರ್ಕಳ ಮೂಲ, ಇನ್ನೊಬ್ಬ ಬೆಂಗಳೂರು, ಮತ್ತೊಂದು ಪೋಸ್ಟ್ ಮಾಡಿದ್ದವರ ಮಾಹಿತಿ ಸಿಕ್ಕಿಲ್ಲ ಅಂತ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಫೇಸ್ ಬುಕ್​ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಅಂತ ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ವಿಚಾರಣೆ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆರಗ ಜ್ಞಾನೇಂದ್ರ ಸೂಚನೆ ಸಿಡಿಎಸ್ ಬಿಪಿನ್ ರಾವತ್ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಕೃತ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ದೇಶ ವಿರೋಧಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ.

ಉಡುಪಿ ಮೂಲದ ಬರಹಗಾರನ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶ ಬಿಪಿನ್ ರಾವತ್ ನಿಧನದ ಬಗ್ಗೆ ವಿಕೃತಿ ಮೆರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಉಡುಪಿ ಮೂಲದ ಬರಹಗಾರರೊಬ್ಬರ ವಿರುದ್ಧ ಫೇಸ್​ಬುಕ್​ನಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ. ಈ ಸಂಬಂಧ ಉಡುಪಿ ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಕೂಡಲೇ ಅವರನ್ನು ಬಂಧಿಸಬೇಕೆಂದು ಸಮಾಜಿಕ ಜಾಲತಾಣದಲ್ಲಿ ಆಗ್ರಹಗಳು ಕೇಳಿಬಂದಿವೆ.

ಇದನ್ನೂ ಓದಿ

ಯುವತಿಯನ್ನು ಹಿಂಬಾಲಿಸಿದ ಆರೋಪ; ಭಾರತೀಯ ಮೂಲದ ವಿದ್ಯಾರ್ಥಿಯನ್ನು ಹೊರಹಾಕಿದ ಬ್ರಿಟನ್ ವಿವಿ

ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ರೌಡಿಗಳ ಅಟ್ಟಹಾಸ; ಲಾಂಗ್​ನಿಂದ ಮನೆ ಬಳಿ ನಿಲ್ಲಿಸಿದ್ದ ಕಾರು, ಇನ್ನಿತರ ವಾಹನಗಳ ಗಾಜು ಪುಡಿ

Published On - 1:05 pm, Sat, 11 December 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ