ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನಲ್ಲಿ ಖ್ಯಾತ ಕಬಡ್ಡಿ ಆಟಗಾರನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಿಸಿದ್ದ ಎರಡನೇ ಪತ್ನಿ ಮೇಲೆ ಅನುಮಾನಗಳು ವ್ಯಕ್ತವಾಗಿವೆ.

ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು
ಸಾಂದರ್ಭಿಕ ಚಿತ್ರ
Image Credit source: India Today
Edited By:

Updated on: Aug 31, 2023 | 1:57 PM

ಮಂಗಳೂರು, (ಆಗಸ್ಟ್ 31): ಖ್ಯಾತ ಕಬಡ್ಡಿ ಆಟಗಾರನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನಲ್ಲಿ ನಡೆದಿದೆ. ಪುದುವೆಟ್ಟು ನಿವಾಸಿ ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ನಾನದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಸ್ವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉಜಿರೆಯ ಸಾನಿಧ್ಯ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ಸ್ವರಾಜ್. ಜಿಲ್ಲಾ ಮಟ್ಟವನ್ನು ಕಬ್ಬಡ್ಡಿಯಲ್ಲಿ ಪ್ರಸಿದ್ದಿಯಾಗಿದ್ದ. ಆದ್ರೆ, ಇದೀಗ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಉದ್ಯಮಿ ಮಾರಾಂಜಿನಪ್ಪ(62) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಾಗರಬಾವಿಯಲ್ಲಿ ಘಟನೆ ನಡೆದಿದೆ. ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಾರಾಂಜಿನಪ್ಪ ಅವರನ್ನು 2ನೇ ಪತ್ನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಉದ್ಯಮಿ ಮಾರಾಂಜಿನಪ್ಪ ಮೃತಪಟ್ಟಿದ್ದಾರೆ. ಆದ್ರೆ, ಮಾರಾಂಜಿನಪ್ಪ ಕುಟುಂಬಸ್ಥರು ಎರಡನೇ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ತನಿಖೆಗೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ