AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drone Prathap​: ಬಿಗ್​ಬಾಸ್​ | ಡ್ರೋನ್ ಪ್ರತಾಪ್ ಸೋತ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಅಭಿಮಾನಿ

ವಿನಯ್ ಗೌಡ, ಸಂಗೀತಾ ಶೃಂಗೇರಿ ಅವರಂಥ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿದ ಡ್ರೋನ್ ಪ್ರತಾಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ನ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಆದರೆ, ಡ್ರೋನ್ ಪ್ರತಾಪ್ ವಿನ್ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಭಾಗಿಸಿದ್ದರು. ಆದರೆ, ರನ್ನರ್ ಅಪ್ ಆಗಿದ್ದು, ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಅಭಿಮಾನಿಯೊಬ್ಬ, ಡ್ರೋನ್ ಪ್ರತಾಪ್ ಸೋತಿದ್ದಕ್ಕೆ ತನ್ನ ಅರ್ಧ ಮೀಸೆ ಹಾಗೂ ಗಡ್ಡವನ್ನು ಬೋಳಿಸಿದ್ದಾನೆ.

Drone Prathap​: ಬಿಗ್​ಬಾಸ್​ | ಡ್ರೋನ್ ಪ್ರತಾಪ್ ಸೋತ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಅಭಿಮಾನಿ
ಡ್ರೋನ್ ಪ್ರತಾಪ್ ಸೋತ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಅಭಿಮಾನಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jan 30, 2024 | 11:14 AM

Share

ಮಂಗಳೂರು, ಜ.30: ವಿನಯ್ ಗೌಡ, ಸಂಗೀತಾ ಶೃಂಗೇರಿ ಅವರಂಥ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿದ ಡ್ರೋನ್ ಪ್ರತಾಪ್ (Drone Prathap) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ನ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಆದರೆ, ಡ್ರೋನ್ ಪ್ರತಾಪ್ ವಿನ್ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಭಾಗಿಸಿದ್ದರು. ಆದರೆ, ರನ್ನರ್ ಅಪ್ ಆಗಿದ್ದು, ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಅದರಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಅಭಿಮಾನಿಯೊಬ್ಬ, ಡ್ರೋನ್ ಪ್ರತಾಪ್ ಸೋತಿದ್ದಕ್ಕೆ ತನ್ನ ಅರ್ಧ ಮೀಸೆ ಹಾಗೂ ಗಡ್ಡವನ್ನು ಬೋಳಿಸಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಂಟ್ರ ಗ್ರಾಮದ ನಿವಾಸಿ ಝೈನುಲ್ ಆಬಿದ್ ಡ್ರೋನ್ ಪ್ರತಾಪ್ ಅಭಿಮಾನಿಯಾಗಿದ್ದಾನೆ. ಬಿಗ್ ಬಾಸ್ ಸೀಸನ್ 10 ರಲ್ಲಿ ಪ್ರತಾಪ್ ವಿನ್ನರ್ ಆಗುತ್ತಾರೆ ಎಂದು ಹೇಳಿಕೊಂಡಿದ್ದ. ಒಂದು ವೇಳೆ ಸೋತರೆ ಅರ್ಧ ಮೀಸೆ, ಗಡ್ಡ ತೆಗೆಯುವುದಾಗಿ ಹಾಗೂ ಜೊತೆಗೆ ಹಸಿಮೆಣಸಿನಕಾಯಿ ತಿನ್ನುವುದಾಗಿ ಚಾಲೆಂಜ್ ಹಾಕಿದ್ದ. ಇದರ ವಿಡಿಯೋವನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.

ಇದನ್ನೂ ಓದಿ: ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ

ಇದೀಗ ಪ್ರತಾಪ್ ರನ್ನರ್ ಅಪ್ ಆಗಿದ್ದರಿಂದ ಅಭಿಮಾನಿ ಝೈನುಲ್ ಆಬಿದ್ ನುಡಿದಂತೆ ನಡೆದುಕೊಂಡಿದ್ದು, ಅರ್ಧ ಮೀಸೆ, ಗಡ್ಡವನ್ನು ಬೋಳಿಸಿ ಹಸಿಮೆಣಸಿನಕಾಯಿ ತಿಂದಿದ್ದಾನೆ. ಇದರ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾನೆ. ವಿಡಿಯೋ ನೋಡಿದ ನೆಟ್ಟಿಗರು ಪರ-ವಿರೋಧ ಕಮೆಂಟ್ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್