AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಜೂಜು ಕೇಂದ್ರ; ಕೈಕಟ್ಟಿ ಕುಳಿತ ಜಿಲ್ಲಾಡಳಿತ

ಕಡಲನಗರಿಯಲ್ಲಿ ಕೆಲ ದಿನಗಳ ಹಿಂದಷ್ಟೇ ಡಾಕ್ಟರ್ಸ್​ಗಳ ನಶಾ ಲೋಕಾದ ಕಹಾನಿ ಬೆಳಕಿಗೆ ಬಂದಿದ್ದು, ಇದೀಗ ಸ್ಕಿಲ್ ಗೇಮ್, ರಿಕ್ರಿಯೇಶನ್ ಕ್ಲಬ್ ಹೆಸರಲ್ಲಿ ಜೂಜು‌ ಅಡ್ಡೆಗಳು ನಡೆಯುತ್ತಿರುವುದು ಗೊತ್ತಾಗಿದೆ.

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಜೂಜು ಕೇಂದ್ರ; ಕೈಕಟ್ಟಿ ಕುಳಿತ ಜಿಲ್ಲಾಡಳಿತ
ಮಂಗಳೂರು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 15, 2023 | 2:49 PM

Share

ಮಂಗಳೂರು: ಕೆಲದಿನಗಳ ಹಿಂದೆ ನಗರದಲ್ಲಿ ಡಾಕ್ಟ್ರರ್ಸ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಅಮಲಿನ ಲೋಕ ಬೆಳಕಿಗೆ ಬಂದಿತ್ತು. ಈ ಅಮಲಿನ‌ ಲೋಕದ ಜೊತೆ ರಿಕ್ರಿಯೇಶನ್‌ ಕ್ಲಬ್‌ಗಳ ಹೆಸರಿನಲ್ಲಿ ರಾಜಾರೋಷವಾಗಿ ಜೂಜು ಕೇಂದ್ರಗಳು ನಡೆಯುತ್ತಿದೆ. ಆದರೆ ಈ ಜೂಜು ಕೇಂದ್ರಗಳನ್ನು ಮಟ್ಟ ಹಾಕುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂಬ ಆರೋಪ‌ ಕೇಳಿ ಬಂದಿದೆ. ಹೀಗಾಗಿ ಈ ಅಕ್ರಮ ಜೂಜು ಕೇಂದ್ರಗಳಿಗೆ ಡಿ.ವೈ.ಎಫ್.ಐ ಸಂಘಟನೆ ದಾಳಿ ಮಾಡಿದ್ದು ಈ ಸಂದರ್ಭದಲ್ಲಿ ಮನೋರಂಜನಾ ಕ್ರೀಡೆಯನ್ನ ಮಾತ್ರ ನಡೆಸಬೇಕಾದ ಕೇಂದ್ರಗಳಲ್ಲಿ ಹಣವನ್ನು ಪಣಕ್ಕಿಟ್ಟು ಆಟ ಏರ್ಪಡಿಸುತ್ತಿರುವುದು ಗೊತ್ತಾಗಿದೆ.

ಈ ರೀತಿಯ ಕ್ಲಬ್​ಗಳಲ್ಲಿ ಮನೋರಂಜನೆಗಷ್ಟೇ ಕ್ಯಾರಂ, ಶೂಟಿಂಗ್ ಸೇರಿದಂತೆ ಇತರ ಒಳಾಂಗಣ ಕ್ರೀಡೆಗಳನ್ನು‌ ಮಾಡಬೇಕು. ಜೊತೆಗೆ ಕ್ಲಬ್​ನ ಸದಸ್ಯರಿಗಷ್ಟೇ ಇಲ್ಲಿ ಆಟ ಆಡೋದಕ್ಕೆ ಅವಕಾಶವಿರುತ್ತದೆ. ಆದರೆ ಇದೀಗ ಮಂಗಳೂರಿನ ಹಲವು ಕಡೆ ಈ ಕೇಂದ್ರಗಳು ತಲೆ ಎತ್ತಿದೆ. ರಿಕ್ರಿಯೇಷನ್‌ ಕ್ಲಬ್‌ ಹೆಸರಿನಲ್ಲಿ ಸ್ಕಿಲ್‌ಗೇಮ್‌, ಮಟ್ಕಾ, ಜೂಜು ದಂಧೆಯನ್ನಾಗಿ ನಡೆಸಿ ಮಂಗಳೂರು ನಗರ ಜೂಜು ನಗರವಾಗಿ ಪರಿವರ್ತಿತವಾಗುತ್ತಿದೆ. ಈ ದಂಧೆಗೆ ಬಲಿಯಾದ ಅದೆಷ್ಟೋ ಯುವಕರು ಹೊರಬರಲಾಗದೆ ಕುಟುಂಬಗಳು ಬೀದಿಪಾಲಾಗುತ್ತಿವೆ. ಜೂಜು ದಂಧೆಗೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಮಧ್ಯಮ ವರ್ಗದ ಕೂಲಿ ಕಾರ್ಮಿಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಆಡಳಿತ ಯಂತ್ರಕ್ಕೆ ದೂರು ನೀಡಿ ಪ್ರಯೋಜನವಾಗದ ಹಿನ್ನಲೆಯಲ್ಲಿ ಜೂಜು ಕೇಂದ್ರ, ಸ್ಕಿಲ್‌ಗೇಮ್‌ ಕೇಂದ್ರಗಳನ್ನು ಮುಚ್ಚುವಂತೆ ಆಗ್ರಹಿಸಿ ಡಿವೈಎಫ್‌ಐ ಬೀದಿಗಿಳಿದಿದ್ದು, ನಗರದ ಈ ಜೂಜು ಕೇಂದ್ರಗಳಿಗೆ ಸಂಘಟನೆ ಕಾರ್ಯಕರ್ತರೇ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು: ಕರಾವಳಿಯಲ್ಲಿ ಮುಂದುವರೆದ ಧರ್ಮಸಂಘರ್ಷ; ಅನ್ಯಧರ್ಮೀಯರಿಗಿಲ್ಲ ವ್ಯಾಪಾರ ಅನುಮತಿ

ಈ ಸೆಂಟರ್​ಗಳ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಆಸ್ತಿ ಸಹಿತ ಅಮೂಲ್ಯ ಸೊತ್ತುಗಳನ್ನು ಕಳದುಕೊಂಡು ಬೀದಿಗೆ ಬಿದ್ದಿವೆ. ಒಟ್ಟಿನಲ್ಲಿ ಕಡಲನಗರಿ ಸಂಪೂರ್ಣ ಜೂಜಿನ ನಗರ ಆಗುವ ಮೊದಲು ಕೂಡಲೇ ಇಂತಹ ಅಡ್ಡೆಗಳ ವಿರುದ್ಧ ಕ್ರಮಕೈಗೊಳ್ಳಬೇಕಾಗಿದೆ.

ವರದಿ: ಅಶೋಕ್ ಟಿವಿ9 ಮಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:28 pm, Sun, 15 January 23

Follow Us
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು