ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ; ಏನಿದು ಅಂತೀರಾ? ಇಲ್ಲಿದೆ ನೋಡಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರ್ಷಕ್ಕೊಂದು ಬಾರಿ, ಅದ್ಧೂರಿಯಾಗಿ ಅಲ್ಲದೆ ಇದ್ದರೂ ಕುಟುಂಬಸ್ಥರು ಹಾಗೂ ತೀರಾ ಆತ್ಮೀಯರು ಪಾಲ್ಗೊಂಡು ಸರಳವಾಗಿ ಮದುವೆ ನಡೆಯುತ್ತದೆ. ಮದುವೆಯಾದ ಜೋಡಿ ಸುಖವಾಗಿರಲಿ ಎಂದು ಹಾರೈಸಿ ಹಿರಿಯರ ಆಶೀರ್ವಾದ ಕೂಡ ನವಜೋಡಿಗಳಿಗೆ ಸಿಕ್ಕಿತ್ತು. ಆದ್ರೆ, ವಿಶೇಷ ಅಂದ್ರೆ ಆ ನವಜೋಡಿಗಳು ಮದುವೆಯ ಸಮಾರಂಭದಲ್ಲಿದ್ದ ಯಾರ ಕಣ್ಣಿಗೂ ಕಾಣಿಸದೆ ಹಸಮಣೆ ಏರಿ ಎಲ್ಲಾ ಶಾಸ್ತ್ರ ಮುಗಿಸಿದ್ರು. ಅರೆ‌‌! ವದು ವರ ಇಲ್ಲದೆ ಇದೆಂತಾ ಮದುವೆ ಅಂತಿರಾ? ಹಾಗಿದ್ರೆ ಈ ಸ್ಟೋರಿ ಓದಿ.

ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ; ಏನಿದು ಅಂತೀರಾ? ಇಲ್ಲಿದೆ ನೋಡಿ
ಪ್ರೇತಾತ್ಮಗಳ ವಿವಾಹ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 09, 2023 | 7:35 AM

ದಕ್ಷಿಣ ಕನ್ನಡ, ಆ.9: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ(Dakshina Kannada), ಉಡುಪಿ(Udupi) ಜಿಲ್ಲೆಗಳಲ್ಲಿ ವರ್ಷಕ್ಕೊಂದು ಬಾರಿ ಕುಟುಂಬದಲ್ಲಿ ಯಾರಾದ್ರೂ, ಮದುವೆ(Marriage)ಯಾಗದೇ ಅಕಾಲಿಕವಾಗಿ ಮೃತ ಪಟ್ಟಿದ್ದರೆ ಅಂತವರ ಮದುವೆಯನ್ನು ತುಳು ಸಂಪ್ರದಾಯದ ಪ್ರಕಾರ ಮಾಡಲಾಗುತ್ತದೆ. ತುಳು ಮಾಸ ಆಟಿ ಅಂದರೆ, ಯಾವುದೇ ಶುಭಕಾರ್ಯಗಳು ಕರಾವಳಿ ಭಾಗದಲ್ಲಿ ನಡೆಯುವುದಿಲ್ಲ. ಆದ್ರೆ, ಈ ಸಮಯದಲ್ಲಿ ಇಂತಹ ಮದುವೆಯ ಸಂಪ್ರದಾಯಗಳು ನಡೆಯುತ್ತದೆ. ಅದರಂತೆ ಇದೀಗ ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿಯ ವದುವಿನ ಕುಟುಂಬ ಹಾಗೂ ಉಳ್ಳಾಲ ತಾಲೂಕಿನ ಕೋಣಾಜೆ ಸಮೀಪದ ಬೊಳ್ಮ ಎಂಬಲ್ಲಿಯ ವರನ ಕುಟುಂಬದ ನಡುವೆ ಮದುವೆ ಸಂಬಂಧ ಏರ್ಪಟ್ಟಿದೆ.

ಮೃತಪಟ್ಟವರ ಆಸೆ ಈಡೇರಿಸುವ ವಿಶಿಷ್ಟ ಆಚರಣೆ

ಬಂಟ್ವಾಳ ತಾಲೂಕಿನ ವಗ್ಗದ ಮಾಂಗಜೆ ಎಂಬಲ್ಲಿಯ ಸಂಜೀವ ಪೂಜಾರಿಯವರ ಮಗಳು ವಿಶಾಲಾಕ್ಷಿ 2 ವರ್ಷದ ಮಗುವಾಗಿದ್ದಾಗ ಅಂದರೆ ಸರಿ ಸುಮಾರು 35 ವರ್ಷಗಳ ಹಿಂದೆ ಮೃತ ಪಟ್ಟಿದ್ದಾರೆ. ಇನ್ನು ಉಳ್ಳಾಲದ ಕೊಣಾಜೆ ಸಮೀಪದ ಬೊಳ್ಮ ಗ್ರಾಮದ ಲಕ್ಷ್ಮಣ ಪೂಜಾರಿಯವರ ಪುತ್ರ ಧರಣೇಶ್ ಕಳೆದ ಎರಡು ವರ್ಷಗಳ ಹಿಂದೆ ಮೃತ ಪಟ್ಟಿದ್ದಾರೆ. ಹೌದು, ಹೃದಯದ ತೊಂದರೆ ಇದ್ದ ಕಾರಣ ಧರಣೇಶ್​ ಅವರಿಗೆ ಮದುವೆ ಮಾಡುವ ಬಗ್ಗೆ ಮನೆಯವರು ಯೋಚನೆ ಮಾಡಿರಲಿಲ್ಲ. ಆದ್ರೆ, ಧರಣೇಶ್​ಗೆ ಮದುವೆ ಆಗಬೇಕು ಎನ್ನುವ ಆಸೆ ಇತ್ತಾದರೂ ಹೃದಯದ ಕಾಯಿಲೆಯಿಂದ ಗುಣಮುಖವಾಗದೆ ಮೃತ ಪಟ್ಟಿದ್ದರು. ವದುವಿನ ಕಡೆಯವರಿಗೆ ಜ್ಯೋತಿಷ್ಯದಲ್ಲಿ ಕಂಡು ಬಂದಂತೆ ವಿಶಾಲಕ್ಷಿಗೆ ಮದುವೆ ಮಾಡಬೇಕಾಗಿತ್ತು. ಈ ವೇಳೆ ವರಾನ್ವೇಶಣೆ ನಡೆಸಿದಾಗ ಧರಣೇಶನ ಸಂಬಂಧ ಸಿಕ್ಕಿ ಎಲ್ಲಾ ಮಾತುಕತೆ ನಡೆಸಿ ಸಂಪ್ರದಾಯದಂತೆ ಮದುವೆ ಕಾರ್ಯ ಮಾಡಲಾಗಿದೆ.

ಇದನ್ನೂ ಓದಿ:ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಅಪರೂಪದ ಮದುವೆ; ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಜೋಡಿಯಾದ 85 ವರ್ಷದ ವರ 65 ವರ್ಷದ ವಧು

ತುಳುನಾಡಿನಲ್ಲಿ ಆಟಿ ಮಾಸದಲ್ಲಿ ನಡೆಯುವ ಈ ಪ್ರೇತಗಳ ಮದುವೆ ವಿಚಿತ್ರ ಅನಿಸಿದರೂ, ಬಹಳಷ್ಟು ವರ್ಷದಿಂದ ಇದು ನಡೆದುಕೊಂಡು ಬಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಕ್ಕಿಲ್ಲದೆ ಇದ್ದರೆ ಕುಟುಂಬದಲ್ಲಿ ಕಾಣಿಸುವ ಸಮಸ್ಯೆಗಳಿಗೆ ಜ್ಯೋತಿಷ್ಯದಲ್ಲಿ ಕಂಡು ಬರುವ ಪರಿಹಾರವಾಗಿ ಈ ರೀತಿಯ ಮದುವೆಗಳು ನಡೆಯುತ್ತದೆ. ಈ ಪ್ರೇತಾತ್ಮಗಳ ಮದುವೆ ತುಳು ಸಂಪ್ರದಾಯದ ಕಟ್ಟುಪಾಡುಗಳಂತೆ ನಡೆಯುವುದು ಒಂದು ವಿಶೇಷ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 am, Wed, 9 August 23

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us