AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​
ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ
TV9 Web
| Edited By: |

Updated on:Aug 09, 2023 | 3:26 PM

Share

ಮಂಗಳೂರು, ಆ.9: ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿ(Mobile Shop)ಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ನಡೆದಿದೆ. ಹೌದು, ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಬಂದಿದ್ದ ಯುವಕ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಮೊಬೈಲ್ ಅಂಗಡಿ ಮಾಲೀಕನಿಗೆ ಥಳಿಸಿ ಯುವಕರು ಪರಾರಿ

ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇನ್ನು ಯುವಕ ಮಾಲೀಕನಿಗೆ ಥಳಿಸಿ, ಅಲ್ಲಿಂದ ತೆರಳಿದ್ದಾನೆ. ಇದಾದ ಬಳಿಕ ತನ್ನ ಗೆಳೆಯರ ಗುಂಪನ್ನ ಕರೆದುಕೊಂಡು ಬಂದು, ಮತ್ತೆ ಹಲ್ಲೆ ಮಾಡಿದ್ದಾನೆ. ಸುಮಾರು ಆರು ಜನರ ತಂಡದಿಂದ ಕೃತ್ಯ ಎಸಗಲಾಗಿದ್ದು, ಹಲ್ಲೆ ನಡೆಸಿದ ದೃಶ್ಯ, ಅಂಗಡಿಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಾಮರಾಜನಗರ: ಮಾದಪ್ಪನ ಬೆಟ್ಟದಲ್ಲಿ ಹೆಚ್ಚಾಯ್ತು ಗಾಂಜಾ ಘಮಲು; ಮಾಲು ಸಮೇತ ಲಾಕ್ ಆದ ಮೂವರು ಪೆಡ್ಲರ್​ಗಳು

ಗಾಂಜಾ ಸೇವಿಸುತ್ತಿದ್ದ ನಾಲ್ವರು ಅರೆಸ್ಟ್

ಕೊಡಗು: ಮಡಿಕೇರಿ‌ನಗರ ಠಾಣಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮಾಡಲಾಗಿದ್ದು, ಗಾಂಜಾ ಸೇವಿಸುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಮಡಿಕೇರಿ ನಗರದ ದೇಚೂರಿನಲ್ಲಿ ಗಾಂಜಾ ಸೇವಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಪ್ರಥಾಪ್, ಮೋನಿಶ್, ಅಕ್ಷಯ್, ಲಿಖಿತ್ ಎಂಬುವವರನ್ನು ಬಂಧಿಸಿದ್ದಾರೆ.

ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು: ದುಷ್ಕರ್ಮಿಗಳು ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾದ ಘಟನೆ ಬಾಣಸ್ವಾಡಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಮಹಿಳೆಯೊಬ್ಬಳೇ ಹೋಗುತ್ತಿರುವುದನ್ನು ಒಂದು ಬಾರಿ ನೋಡಿ, ಮತ್ತೆ ವಾಪಾಸ್ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಬೈಕ್​ನಲ್ಲಿ ಬಂದ ಇಬ್ಬರಿಂದ ಕೃತ್ಯ ಎಸಗಲಾಗಿದ್ದು, ನಿನ್ನೆ ರಾತ್ರಿ ವೇಳೆ 7 ಗಂಟೆಯ ಸಂಧರ್ಭದಲ್ಲಿ ನಡೆದಿದೆ. ಈ ಕುರಿತು ಬಾಣಸ್ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:25 pm, Wed, 9 August 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ