Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಬೃಹತ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳವು; ಆರೋಪಿ ಪರಾರಿ

20 ಅಡಿ ಆಳದಲ್ಲಿ ಹಾದು ಹೋಗಿದ್ದ ಪೆಟ್ರೋಲ್ ಪೈಪ್ ಲೈನ್ ಅಗೆದು ಇನ್ನೊಂದು ಪೈಪ್ ಅಳವಡಿಸಿ ಪೆಟ್ರೋಲ್ ಕದ್ದಿದ್ದಾರೆ. ಅರ್ಧ ಕಿ.ಮೀ ದೂರದಲ್ಲಿ ಗೇಟ್ ವಾಲ್ ಸಿಕ್ಕಿಸಿ ಟ್ಯಾಪ್ ಮೂಲಕ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಮಾರಾಟ ಮಾಡಿದ್ದಾರೆ.

ಮಂಗಳೂರಿನಲ್ಲಿ ಬೃಹತ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳವು; ಆರೋಪಿ ಪರಾರಿ
ಕಂಪೆನಿಯವರು ಹುಡುಕಾಟ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ
Follow us
TV9 Web
| Updated By: sandhya thejappa

Updated on:Jul 31, 2021 | 10:36 AM

ಮಂಗಳೂರು: ಹಿಂದೂಸ್ತಾನ್ ಪೆಟ್ರೋಲಿಯಂಗೆ ಸೇರಿದ ಪೈಪ್ ಲೈನ್ ಕೊರೆದು ಪೆಟ್ರೋಲ್ (petrol) ಕದ್ದಿರುವ (Theft) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೋರ್ನಾಡು ಅರ್ಬಿ ಬಳಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್ ಪೂರೈಕೆ ಮಾಡುವ ಬೃಹತ್ ಪೈಪ್ ಲೈನ್ ಅನ್ನು ಕೊರೆದು ಕಳ್ಳತನ ಮಾಡಿದ್ದಾರೆ. ಐವನ್ ಎಂಬಾತನಿಗೆ ಸೇರಿದ ಖಾಸಗಿ ಜಮೀನಿನ ರಸ್ತೆಯಲ್ಲಿ ಪೈಪ್ ಲೈನ್ ಹಾದು ಹೋಗಿತ್ತು. ಪೆಟ್ರೋಲ್ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದು ಕಂಪೆನಿಯವರು ಹುಡುಕಾಟ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

20 ಅಡಿ ಆಳದಲ್ಲಿ ಹಾದು ಹೋಗಿದ್ದ ಪೆಟ್ರೋಲ್ ಪೈಪ್ ಲೈನ್ ಅಗೆದು ಇನ್ನೊಂದು ಪೈಪ್ ಅಳವಡಿಸಿ ಪೆಟ್ರೋಲ್ ಕದ್ದಿದ್ದಾರೆ. ಅರ್ಧ ಕಿ.ಮೀ ದೂರದಲ್ಲಿ ಗೇಟ್ ವಾಲ್ ಸಿಕ್ಕಿಸಿ ಟ್ಯಾಪ್ ಮೂಲಕ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಮಾರಾಟ ಮಾಡಿದ್ದಾರೆ. ಕಂಪೆನಿಯವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿ, ಪೊಲೀಸರ ಸಮಕ್ಷಮ ಜೆಸಿಬಿ ಮೂಲಕ ಅಗೆದಾಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಐವನ್ ಪರಾರಿಯಾಗಿದ್ದು, ಬಂಟ್ವಾಳ ಪೊಲೀಸರು ಹುಡುಕಾಟ ನಡೆಸುತಿದ್ದಾರೆ.

23 ಲಕ್ಷ ಬೆಲೆಬಾಳುವ ಕಾರಿಗೆ 10 ಸಾವಿರ ಹಣ ನೀಡಿ ಪರಾರಿ ನೆಲಮಂಗಲ: ಜಕ್ಕಸಂದ್ರದ ಮಂಜ ಅಲಿಯಾಸ್ ಅಪಲ್ ಮಂಜ ಎಂಬುವವನು ಕಾರು ತೆಗೆದುಕೊಳ್ಳುವ ಸೋಗಿನಲ್ಲಿ ಬಂದು 10 ಸಾವಿರ ಮುಂಗಡ ಹಣ ಕೊಟ್ಟು ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ನಡೆದಿದೆ. ಜೆಪಿ ನಗರದ ವಾಣಿ ಅವರಿಗೆ ಸೇರಿದ ಎಕ್ಸ್.ಯು.ವಿ. 500, ಕೆಎ05-ಎಂಎಕ್ಸ್-2407 ನಂಬರಿನ ಕಪ್ಪು ಬಣ್ಣದ ಮಹೀಂದ್ರ ಕಾರನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ.

23 ಲಕ್ಷ ಬೆಲೆಬಾಳುವ ಕಾರಿಗೆ ಕೇವಲ 10ಸಾವಿರ ಹಣ ನೀಡಿ ಪರಾರಿಯಾಗಿದ್ದಾನೆ. ಅಲ್ಲದೇ ಮುಂಗಡ ಹಣ ಕೊಡುವ ವೇಳೆ ನಕಲಿ ಪೋನ್ ನಂಬರ್ ಕೊಟ್ಟು ಯಾಮಾರಿಸಿದ್ದಾನೆ. ವಾಪಸ್ ಬರದಿದ್ದಕ್ಕೆ ಮಾಲೀಕರು ಕರೆ ಮಾಡಿದರೆ ಮೊಬೈಲ್ ಸ್ವಿಚ್ ಅಫ್ ಅಂತ ಬರುತ್ತಿದೆ. ಪರಾರಿಯಾಗಿರುವ ಮಂಜನಿಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

Car

ಕಳ್ಳತನವಾಗಿರುವ ಕಾರು

ಇದನ್ನೂ ಓದಿ

ಆಲೂರು ಗ್ರಾಮದ ಬಳಿ ಕಲ್ಲಿನ ಕ್ವಾರೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಸ್ಪೋಟಕಗಳ ವಶ

ಜಿಮ್ನಾಸ್ಟಿಕ್ ಸ್ಪರ್ಧಿಗಳನ್ನು ತನ್ನ ಬೇಟೆ ಎಂದು ಭಾವಿಸಿದ ಮುದ್ದಾದ ಬೆಕ್ಕು; ವಿಡಿಯೊ ವೈರಲ್

(A huge pipeline in Mangalore has been drilled and petrol stolen)

Published On - 10:36 am, Sat, 31 July 21

ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ