AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಬ್ಬರಿ ಎಣ್ಣೆಯೊಂದಿಗೆ KSRTC ಬಸ್​ ಹತ್ತಿದ ಮಹಿಳೆ; ಏನಿದು ಎಂದು ಕೇಳಿದ ಚಾಲಕ, ಬಾಂಬ್ ಎಂದು ಗದರಿದ ಮಹಿಳೆ

ಮಂಗಳೂರು-ಹಾಸನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕೊಬ್ಬರಿ ಎಣ್ಣೆ ಕೊಂಡೊಯ್ಯುವ ವಿಚಾರದಲ್ಲಿ ಸಿಬ್ಬಂದಿ ಹಾಗೂ ಮಹಿಳೆ ನಡುವೆ ವಾಗ್ವಾದ ನಡೆದಿದ್ದು, ಏನಿದು ಎಂದು ಚಾಲಕ ಕೇಳಿದ್ದಕ್ಕೆ ಬಾಂಬ್ ಇದು ಎಂದು ಮಹಿಳೆ ಗದರಿದ್ದಾರೆ. ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೊನೆಗೆ ಬಂಟ್ವಾಳ ಪೊಲೀಸರು ಮಧ್ಯಪ್ರವೇಶಿಸುವಂತಾಯಿತು.

ಕೊಬ್ಬರಿ ಎಣ್ಣೆಯೊಂದಿಗೆ KSRTC ಬಸ್​ ಹತ್ತಿದ ಮಹಿಳೆ; ಏನಿದು ಎಂದು ಕೇಳಿದ ಚಾಲಕ, ಬಾಂಬ್ ಎಂದು ಗದರಿದ ಮಹಿಳೆ
ಕೊಬ್ಬರಿ ಎಣ್ಣೆಯೊಂದಿಗೆ KSRTC ಬಸ್​ ಹತ್ತಿದ ಮಹಿಳೆ ಮತ್ತು ಸಿಬ್ಬಂದಿ ನಡುವೆ ತೀವ್ರ ವಾಗ್ವಾದ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on: Nov 14, 2023 | 6:53 PM

Share

ಮಂಗಳೂರು, ನ:14: ಹಾಸನ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಕೊಬ್ಬರಿ ಎಣ್ಣೆ ಕೊಂಡೊಯ್ಯುವ ವಿಚಾರದಲ್ಲಿ ಸಿಬ್ಬಂದಿ ಹಾಗೂ ಮಹಿಳೆ ನಡುವೆ ವಾಗ್ವಾದ ನಡೆದಿದ್ದು, ಏನಿದು ಎಂದು ಚಾಲಕ ಕೇಳಿದ್ದಕ್ಕೆ ಬಾಂಬ್ ಇದು ಎಂದು ಮಹಿಳೆ ಗದರಿದ್ದಾರೆ. ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೊನೆಗೆ ಬಂಟ್ವಾಳ (Bantwal) ಪೊಲೀಸರು ಮಧ್ಯಪ್ರವೇಶಿಸುವಂತಾಯಿತು.

ಕೆಎಸ್‌ಆರ್‌ಟಿಸಿಯ ಮೂಲಗಳು ವಿವರಗಳನ್ನು ನೀಡುತ್ತಾ, ಬಸ್ ಹಾಸನ ವಿಭಾಗಕ್ಕೆ ಸೇರಿದೆ ಎಂದು ತಿಳಿಸಿವೆ. ಅಲ್ಲದೆ, ಮಹಿಳೆ ಕೆಎಸ್‌ಆರ್‌ಟಿಸಿ ಉದ್ಯೋಗಿಯ ಪತ್ನಿ ಎಂದು ತಿಳಿದು ಬಂದಿದೆ. ಮೂರು ಕೊಬ್ಬರಿ ಎಣ್ಣೆ ಡಬ್ಬಿಯೊಂದಿಗೆ ಮಹಿಳೆಯೊಬ್ಬರು ಬಸ್ ಹತ್ತಿದ್ದಾರೆ. ಇದು ಏನು ಎಂದು ಚಾಲಕ ಕೇಳಿದಾಗ, ಮಹಿಳೆ ಸಿಟ್ಟಾಗಿ ಬಾಂಬ್ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: KSRTC ಬಸ್​ನಲ್ಲಿ ಕೋಳಿ ಮಾಂಸ ಜಗಳ; ಠಾಣೆಗೆ ಬಸ್​ ತೆಗೆದುಕೊಂಡು ಹೋದ ಚಾಲಕ

ಇದು ಪರಿಸ್ಥಿತಿಯನ್ನು ಮತ್ತೊಂದು ತಿರುವು ಪಡೆಯಲು ಕಾರಣವಾಗಿ ಬಸ್ ಕಂಡೆಕ್ಟರ್ ಹಾಗೂ ಮಹಿಳೆಯ ನಡುವೆ ತೀವ್ರ ವಾಗ್ವಾದ ನಡೆಯಿತು. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದಾರೆ ಎಂದು ಬಂಟ್ವಾಳ ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಪ್ರಯಾಣಿಕರೊಬ್ಬರು ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕೋಳಿ ಮಾಂಸ ಕೊಂಡೊಯ್ದಿದ್ದಕ್ಕೆ ಆಕ್ರೋಶಗೊಂಡ ಕಂಡೆಕ್ಟರ್ ಹಾಗೂ ಚಾಲಕ ಬಸ್​ ಅನ್ನು ನೇರವಾಗಿ ಪೊಲೀಸ್ ಠಾಣೆಗೆ ಕೊಂಡೊಯ್ದ ಘಟನೆ ನಡೆದಿತ್ತು. ಕೊನೆಗೆ ಪೊಲೀಸರು ಬಸ್ ಸಿಬ್ಬಂದಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಇನ್ನು, ಸಿಬ್ಬಂದಿ ನಡೆಗೆ ಪ್ರಯಾಣಿಕ ಆಕ್ರೋಶ ಹೊರಹಾಕಿದ್ದರು. ಕೂಲಿ ಮಾಡಿ ಜೀವನ ಸಾಗಿಸುವ ನಾವು ಕೋಳಿ ಮಾಂಸವನ್ನು ಹಣಕೊಟ್ಟು ಆಟೋದಲ್ಲಿ ಕೊಂಡೊಯ್ಯಲು ಆಗುತ್ತಾ ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್