AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಸಾಂಬಾರ್ ಚೆಲ್ಲಿದ್ದಕ್ಕೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ

ಶಾಲೆಯಲ್ಲಿ ಮದ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಸಹ ವಿದ್ಯಾರ್ಥಿ ಕುಳಿತಕೊಳ್ಳುವ ಜಾಗದಲ್ಲಿ ಸಾಂಬಾರ್ ಚೆಲ್ಲಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು, ಓರ್ವ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ನಡೆದಿದೆ.

Mangalore News: ಸಾಂಬಾರ್ ಚೆಲ್ಲಿದ್ದಕ್ಕೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ
ಪ್ರಾತಿನಿಧಿಕ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 21, 2023 | 12:09 PM

Share

ಮಂಗಳೂರು, ಜು.21: ಶಾಲೆ(School)ಯಲ್ಲಿ ಮದ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಸಹ ವಿದ್ಯಾರ್ಥಿ(Student)ಕುಳಿತಕೊಳ್ಳುವ ಜಾಗದಲ್ಲಿ ಸಾಂಬಾರ್ ಚೆಲ್ಲಿದೆ. ಇದೇ ಕ್ಷುಲ್ಲಕ ವಿಚಾರಕ್ಕೆ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಜಗಳ ಶುರುವಾಗಿದ್ದು, ಈ ವೇಳೆ 9ನೇ ತರಗತಿ ಸಹಪಾಠಿಗೆ ಚಾಕು ಇರಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಬುಧವಾರ (ಜು.19) ನಡೆದಿದೆ. ಗಾಯಗೊಂಡಿರುವ ವಿದ್ಯಾರ್ಥಿಯನ್ನ ಕೂಡಲೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಕುರಿತು ‘ಊಟದ ಸಮಯದಲ್ಲಿ, ಒಬ್ಬ ಹುಡುಗ ತನ್ನ ಸಹಪಾಠಿ ಕುಳಿತುಕೊಳ್ಳಬೇಕಾದ ಸ್ಥಳದಲ್ಲಿ ಸಾಂಬಾರ್ ಚೆಲ್ಲಿದ್ದಾನೆ. ಇದರಿಂದ ಉದ್ರೇಕಗೊಂಡ ವಿದ್ಯಾರ್ಥಿ ಸ್ಥಳವನ್ನು ಸ್ವಚ್ಛಗೊಳಿಸಲು ತನ್ನ ಸಹಪಾಠಿಗೆ ಕೇಳಿದ್ದಾನೆ. ಈ ವೇಳೆ ಇಬ್ಬರು ಹುಡುಗರ ನಡುವೆ ಜಗಳವಾಗಿದೆ. ನಂತರ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಜಗಳ ಅತಿರೇಕಕ್ಕೆ ಹೋಗಿ ಓರ್ವ ವಿದ್ಯಾರ್ಥಿ ಸಹಪಾಠಿ ಎದೆಗೆ ಚಾಕು ಇರಿದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ನಿಷೇದಾಜ್ಞೆ ಮತ್ತೆ ಮುಂದುವರಿಕೆ; ಎಸ್​ಡಿಪಿಐ ಸಮಾವೇಶದಲ್ಲಿ ಚಾಕು ಇರಿತ ಪ್ರಕರಣದ ಆರೋಪಿಗಳು

ಇನ್ನು ಘಟನೆಯ ದೃಶ್ಯಾವಳಿಗಳು ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗುತ್ತಿದ್ದು, ಇನ್ನು ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್​, ಘಟನೆ ಕುರಿತು ಮಾಹಿತಿ ಪಡೆದಿದ್ದು, ಕೊಣಾಜೆ ಪೊಲೀಸ್​ ಠಾಣೆಯ ಪಿಎಸ್​ಐ ಸೇರಿದಂತೆ ಅಧಿಕಾರಿಗಳು ಮತ್ತು ಶಾಲೆಯ ಅಭಿವೃದ್ದಿ ಸಮಿತಿಯ ಸದಸ್ಯರು ಶಾಲೆಗೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿ ಮಕ್ಕಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಇನ್ನು ಶಾಲೆಗೆ ಹೋಗುವ ವಿದ್ಯಾರ್ಥಿ ಬ್ಯಾಗ್​ಲ್ಲಿ ಚಾಕು ಹೇಗೆ ಬಂತು? ಎಲ್ಲದರ ಮಾಹಿತಿ ತನಿಖೆಯಿಂದಲೇ ಹೊರಬರಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ