Mangalore News: ಸಾಂಬಾರ್ ಚೆಲ್ಲಿದ್ದಕ್ಕೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2023 | 12:09 PM

ಶಾಲೆಯಲ್ಲಿ ಮದ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಸಹ ವಿದ್ಯಾರ್ಥಿ ಕುಳಿತಕೊಳ್ಳುವ ಜಾಗದಲ್ಲಿ ಸಾಂಬಾರ್ ಚೆಲ್ಲಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು, ಓರ್ವ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ನಡೆದಿದೆ.

Mangalore News: ಸಾಂಬಾರ್ ಚೆಲ್ಲಿದ್ದಕ್ಕೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ
ಪ್ರಾತಿನಿಧಿಕ ಚಿತ್ರ
Follow us on

ಮಂಗಳೂರು, ಜು.21: ಶಾಲೆ(School)ಯಲ್ಲಿ ಮದ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಸಹ ವಿದ್ಯಾರ್ಥಿ(Student)ಕುಳಿತಕೊಳ್ಳುವ ಜಾಗದಲ್ಲಿ ಸಾಂಬಾರ್ ಚೆಲ್ಲಿದೆ. ಇದೇ ಕ್ಷುಲ್ಲಕ ವಿಚಾರಕ್ಕೆ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಜಗಳ ಶುರುವಾಗಿದ್ದು, ಈ ವೇಳೆ 9ನೇ ತರಗತಿ ಸಹಪಾಠಿಗೆ ಚಾಕು ಇರಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಬುಧವಾರ (ಜು.19) ನಡೆದಿದೆ. ಗಾಯಗೊಂಡಿರುವ ವಿದ್ಯಾರ್ಥಿಯನ್ನ ಕೂಡಲೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಕುರಿತು ‘ಊಟದ ಸಮಯದಲ್ಲಿ, ಒಬ್ಬ ಹುಡುಗ ತನ್ನ ಸಹಪಾಠಿ ಕುಳಿತುಕೊಳ್ಳಬೇಕಾದ ಸ್ಥಳದಲ್ಲಿ ಸಾಂಬಾರ್ ಚೆಲ್ಲಿದ್ದಾನೆ. ಇದರಿಂದ ಉದ್ರೇಕಗೊಂಡ ವಿದ್ಯಾರ್ಥಿ ಸ್ಥಳವನ್ನು ಸ್ವಚ್ಛಗೊಳಿಸಲು ತನ್ನ ಸಹಪಾಠಿಗೆ ಕೇಳಿದ್ದಾನೆ. ಈ ವೇಳೆ ಇಬ್ಬರು ಹುಡುಗರ ನಡುವೆ ಜಗಳವಾಗಿದೆ. ನಂತರ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಜಗಳ ಅತಿರೇಕಕ್ಕೆ ಹೋಗಿ ಓರ್ವ ವಿದ್ಯಾರ್ಥಿ ಸಹಪಾಠಿ ಎದೆಗೆ ಚಾಕು ಇರಿದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ನಿಷೇದಾಜ್ಞೆ ಮತ್ತೆ ಮುಂದುವರಿಕೆ; ಎಸ್​ಡಿಪಿಐ ಸಮಾವೇಶದಲ್ಲಿ ಚಾಕು ಇರಿತ ಪ್ರಕರಣದ ಆರೋಪಿಗಳು

ಇನ್ನು ಘಟನೆಯ ದೃಶ್ಯಾವಳಿಗಳು ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗುತ್ತಿದ್ದು, ಇನ್ನು ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್​, ಘಟನೆ ಕುರಿತು ಮಾಹಿತಿ ಪಡೆದಿದ್ದು, ಕೊಣಾಜೆ ಪೊಲೀಸ್​ ಠಾಣೆಯ ಪಿಎಸ್​ಐ ಸೇರಿದಂತೆ ಅಧಿಕಾರಿಗಳು ಮತ್ತು ಶಾಲೆಯ ಅಭಿವೃದ್ದಿ ಸಮಿತಿಯ ಸದಸ್ಯರು ಶಾಲೆಗೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿ ಮಕ್ಕಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಇನ್ನು ಶಾಲೆಗೆ ಹೋಗುವ ವಿದ್ಯಾರ್ಥಿ ಬ್ಯಾಗ್​ಲ್ಲಿ ಚಾಕು ಹೇಗೆ ಬಂತು? ಎಲ್ಲದರ ಮಾಹಿತಿ ತನಿಖೆಯಿಂದಲೇ ಹೊರಬರಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ