AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ದೂರು ಕೊಡಲು ಹೋಗಿದ್ದ ಮಹಿಳೆಗೆ ಪೊಲೀಸ್​ ಇನ್ಸ್​ಪೆಕ್ಟರ್​ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಲೈಂಗಿಕವಾಗಿ ಸಹಕರಿಸು. ಇಲ್ಲ ಅಂದ್ರೆ 25 ಲಕ್ಷ ಕೊಡು. ಅದು ಸಹ ಆಗದಿದ್ದರೆ ನಿನ್ನ ಗಂಡನ ಮೇಲೆ ರೌಡಿಶೀಟ್ ಓಪನ್ ಮಾಡುವುದಾಗಿ ಇನ್ಸ್​ಪೆಕ್ಟರ್​ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ, ಮಹಿಳೆ ಆರೋಪ ಮಾಡಿದ ಇನ್ಸ್​ಪೆಕ್ಟರ್​ ಯಾರು? ಏನಿದು ಪ್ರಕರಣ ಎನ್ನುವ ಮಾಹಿತಿ ಇಲ್ಲಿದೆ.

ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 17, 2026 | 3:37 PM

Share

ಮಂಗಳೂರು, (ಮಾರ್ಚ್ 16): ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ (Woman) ಇನ್ಸ್​ಪೆಕ್ಟರ್ (Inspector) ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಮೂಡಬಿದ್ರೆ ಪೊಲೀಸ್​ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್​ಪೆಕ್ಟರ್​ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.

ಮಹಿಳೆಯ ಆರೋಪವೇನು?

ಪ್ರಕರಣವೊಂದರಲ್ಲಿ ಮೂಡಬಿದ್ರೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಸಂಬಂಧ ಬಂಧಿತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾಳೆ. ಈ ವೇಳೆ ಇನ್ಸ್​ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಸ್ವತಃ ಮಹಿಳೆಯೇ ಆರೋಪಿಸಿದ್ದಾರೆ. ಪತಿಯನ್ನು ಬಿಡಬೇಕಂದ್ರೆ ಲೈಂಗಿಕವಾಗಿ ಸಹಕರಿಸು. ಇಲ್ಲ 25 ಲಕ್ಷ ರೂಪಾಯಿ ಕೊಡಬೇಕು. ಇಲ್ಲಿ ಪೋಸ್ಟ್​ಗಾಗಿ ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಹಣ ಕೊಡದಿದ್ರೆ ನಿನ್ನ ಪತಿ ಮೇಲೆ ರೌಡಿಶೀಟ್ ಓಪನ್ ಮಾಡುತ್ತೇನೆ ಎಂದು ಇನ್ಸ್​ಪೆಕ್ಟರ್ ಸಂದೇಶವನ್ನ ಬೆದರಿಕೆ ಹಾಕಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.

ನೂರಾರು ಮಹಿಳೆಯರು ಇದೇ ರೀತಿ ನನ್ನ ಜೊತೆಗೆ ಇದ್ದಾರೆ. ಅವರಂತೆ ನೀನು ಕೂಡ ಲೈಂಗಿಕವಾಗಿ ಸಹಕರಿಸು. ಇಲ್ಲದಿದ್ರೆ ಡ್ರಗ್ಸ್​ ಪೆಡ್ಲರ್​ಗಳಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯುತ್ತೇನೆ ಎಂದು ಇನ್ಸ್​ಪೆಕ್ಟರ್​ ಸಂದೇಶ್ ಧಮ್ಕಿ ಹಾಕಿದ್ದಾಗಿ ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಈ ಸಂಬಂಧ ಮಹಿಳೆ, ಇನ್ಸ್​ಪೆಕ್ಟರ್​ ಸಂದೇಶ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ಯಾವುದೇ ಉಪಯೋಗವಾಗಿಲ್ಲ. ಪಿಐ ಸಂದೇಶ ಮೇಲೆ ಮೇಲಾಧಿಕಾರಿಗಳಿಗಳ ಕೃಪಾಕಟಾಕ್ಷ‌ ಇದೆ. ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Mon, 16 March 26

Follow Us
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ