AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ; ಗುಡಿಯ ಬಾಗಿಲು ಒದ್ದು ಅಪಚಾರ

ಯುವಕನೊಬ್ಬ ಪ್ರಸಿದ್ದ ಪುಣ್ಯಕ್ಷೇತ್ರ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ (Kadri Shree Manjunatha Temple)ದಲ್ಲಿ ಹುಚ್ಚಾಟ ಮೆರೆದ ಘಟನೆ ನಡೆದಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಆತನನ್ನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ ಎಂದು ಕದ್ರಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ ಹೇಳಿದ್ದಾರೆ.

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ; ಗುಡಿಯ ಬಾಗಿಲು ಒದ್ದು ಅಪಚಾರ
ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ
ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 09, 2024 | 2:57 PM

Share

ದಕ್ಷಿಣ ಕನ್ನಡ, ಜು.09: ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ (Kadri Shree Manjunatha Temple)ದಲ್ಲಿ ಯುವಕನೊಬ್ಬ ಹುಚ್ಚಾಟ ಮೆರೆದ ಘಟನೆ ಇಂದು(ಜು.09) ಬೆಳ್ಳಂಬೆಳಿಗ್ಗೆ ನಡೆದಿದೆ. ಹೌದು, ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣದ ಒಳಗೆಯೇ ಯುವಕ ಪ್ರವೇಶಿಸಿ, ಬಳಿಕ ದೇವಸ್ಥಾನದಲ್ಲಿ ರಂಪಾಟ ಮಾಡಿದ್ದಾನೆ. ಇನ್ನು ಇದನ್ನೂ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನಂತೆ.

ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ

ಇನ್ನು ಅಷ್ಟಕ್ಕೆ ಸುಮ್ಮನಾಗದ ಯುವಕ, ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ ಆರೋಪ ಕೂಡ ಕೇಳಿಬಂದಿದೆ. ನಂತರ ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಹುಚ್ಚಾಟ ನಡೆಸಿದ್ದಾನಂತೆ. ಈ ವೇಳೆ ಸ್ಥಳದಲ್ಲಿದ್ದವರೂ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನಿಡಿದ್ದು, ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈ ಯುವಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಚೂರು ಆಯ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ

ಇನ್ನು ಈ ಯುವಕನ ಹುಚ್ಚಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಕುರಿತು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ ಮಾತನಾಡಿ, ‘ಬೆಳಗ್ಗೆ 7:20 ಕ್ಕೆ ಯುವಕನೊಬ್ಬ ಗೇಟ್ ದೂಡಿಕೊಂಡು ಬೈಕ್​ನಲ್ಲಿಯೇ ಗರ್ಭಗುಡಿಯ ಆವರಣದ ಒಳಗೆ ಬಂದಿದ್ದಾನೆ. ಅದನ್ನು ನೋಡಿ‌ ಭದ್ರತಾ ಸಿಬ್ಬಂದಿ, ಸಾರ್ವಜನಿಕರು ಹಿಡಿದು ಅವನನ್ನು‌ ನಿಲ್ಲಿಸಿದ್ದಾರೆ. ಆಗ, ಯುವಕ ದೇವಸ್ಥಾನದ ಮೇಲೆ ಹೋಗಿ ದಾಂಧಲೆ ಮಾಡಿದ್ದಾನೆ. ಪೊಲೀಸರಿಗೂ ವಿಷಯ ತಿಳಿಸಿದ್ದು, ಅವರು ಬಂದು ಅವನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಆತನನ್ನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ. ಅವನ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾನಸಿಕ ಅಸ್ವಸ್ಥನಂತೆ ಕಾಣ್ತಿದ್ದನಂತೆ. ಪೊಲೀಸರು ಈ ಬಗ್ಗೆ ವಿಚಾರಣೆ ಮಾಡಬೇಕು. ಕಳೆದ ಸಾರಿ ಇದ್ದ ಸೆಕ್ಯೂರಿಟಿ ಏಜೆನ್ಸಿ ಚೇಂಜ್ ಮಾಡಿ ಬೇರೆಯವರನ್ನು ಹಾಕಿದ್ದೇವೆ. ದೇವಸ್ಥಾನ ಶುದ್ದೀಕರಣ ಎಲ್ಲಾ ಮಾಡಿದ್ದೇವೆ ಎಂದು ಕದ್ರಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಜಯಮ್ಮ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 9 July 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!