AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ವಿರೋಧ, ಕಾರ್ಯಕರ್ತರ ಧರಣಿ

ಪರೀಕ್ಷಾ ಫಲಿತಾಂಶ, ಉಪನ್ಯಾಸಕರ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕೋಮು ವಿಚಾರವಾಗಿಯೂ ವಿವಾದ ನಡೆಯುತ್ತಿದೆ. ಇತ್ತೀಚೆಗಷ್ಟೇ, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ಎಸ್​ಯುಐ ವಿರೋಧ ವ್ಯಕ್ತಪಡಿಸಿತ್ತು. ಇದೀಗ, ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ವಿರೋಧ, ಕಾರ್ಯಕರ್ತರ ಧರಣಿ
ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ವಿರೋಧ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on: Sep 09, 2023 | 11:02 AM

Share

ಮಂಗಳೂರು, ಸೆ.9: ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ (Mangaluru University) ಇತ್ತೀಚೆಗಷ್ಟೇ, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ಎಸ್​ಯುಐ ವಿರೋಧ ವ್ಯಕ್ತಪಡಿಸಿತ್ತು. ಇದೀಗ, ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ (ABVP) ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಆದರೆ ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರೋಧ ವ್ಯಕ್ತಪಡಿಸುತ್ತಿದೆ. ಶಂಸುಲ್ ಇಸ್ಲಾಂ ಉಪನ್ಯಾಸವನ್ನು ವಿರೋಧಿಸಿ ಆವರಣದಲ್ಲಿ ಎಬಿವಿಪಿ‌ ಕಾರ್ಯಕರ್ತರ ಧರಣಿ ನಡೆಸುತ್ತಿದ್ದು, ಗೋ ಬ್ಯಾಕ್ ಶಂಸುಲ್ ಎಂದು ಘೋಷಣೆ ಕೂಗುತ್ತಿದ್ದಾರೆ.

ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಮಂಗಳೂರು ವಿವಿ ಗಣೇಶೋತ್ಸವ ವಿವಾದ: ಸ್ಪೀಕರ್ ಯುಟಿ ಖಾದರ್ ಹೇಳಿದ್ದೇನು?

ವಿವಾದಗಳಿಂದಲೇ ಹೆಚ್ಚು ಸುದ್ದಿ ಮಾಡುವ ಮಂಗಳೂರು ವಿಶ್ವವಿದ್ಯಾಲಯ, ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಎಬಿವಿಪಿ ಹಿಂದೂ ಮುಖಂಡನಿಗೆ ಆತಿಥ್ಯ ನೀಡಿತ್ತು. ಇದಕ್ಕೆ ಎನ್ಎಸ್​ಯುಐ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎನ್​ಎಸ್​ಯುಐ ಹೇಳಿತ್ತು. ಇದು ಎನ್​ಎಸ್​ಯುಐ ಮತ್ತು ಎಬಿವಿಪಿ ನಡುವೆ ಗುದ್ದಾಟಕ್ಕೆ ಕಾರಣವಾಗಿತ್ತು. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ