AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ವಿರೋಧ, ಕಾರ್ಯಕರ್ತರ ಧರಣಿ

ಪರೀಕ್ಷಾ ಫಲಿತಾಂಶ, ಉಪನ್ಯಾಸಕರ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕೋಮು ವಿಚಾರವಾಗಿಯೂ ವಿವಾದ ನಡೆಯುತ್ತಿದೆ. ಇತ್ತೀಚೆಗಷ್ಟೇ, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ಎಸ್​ಯುಐ ವಿರೋಧ ವ್ಯಕ್ತಪಡಿಸಿತ್ತು. ಇದೀಗ, ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ವಿರೋಧ, ಕಾರ್ಯಕರ್ತರ ಧರಣಿ
ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ ವಿರೋಧ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Sep 09, 2023 | 11:02 AM

Share

ಮಂಗಳೂರು, ಸೆ.9: ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ (Mangaluru University) ಇತ್ತೀಚೆಗಷ್ಟೇ, ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ಎಸ್​ಯುಐ ವಿರೋಧ ವ್ಯಕ್ತಪಡಿಸಿತ್ತು. ಇದೀಗ, ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ‌ (ABVP) ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಆದರೆ ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರೋಧ ವ್ಯಕ್ತಪಡಿಸುತ್ತಿದೆ. ಶಂಸುಲ್ ಇಸ್ಲಾಂ ಉಪನ್ಯಾಸವನ್ನು ವಿರೋಧಿಸಿ ಆವರಣದಲ್ಲಿ ಎಬಿವಿಪಿ‌ ಕಾರ್ಯಕರ್ತರ ಧರಣಿ ನಡೆಸುತ್ತಿದ್ದು, ಗೋ ಬ್ಯಾಕ್ ಶಂಸುಲ್ ಎಂದು ಘೋಷಣೆ ಕೂಗುತ್ತಿದ್ದಾರೆ.

ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಎಬಿವಿಪಿ‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಮಂಗಳೂರು ವಿವಿ ಗಣೇಶೋತ್ಸವ ವಿವಾದ: ಸ್ಪೀಕರ್ ಯುಟಿ ಖಾದರ್ ಹೇಳಿದ್ದೇನು?

ವಿವಾದಗಳಿಂದಲೇ ಹೆಚ್ಚು ಸುದ್ದಿ ಮಾಡುವ ಮಂಗಳೂರು ವಿಶ್ವವಿದ್ಯಾಲಯ, ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಎಬಿವಿಪಿ ಹಿಂದೂ ಮುಖಂಡನಿಗೆ ಆತಿಥ್ಯ ನೀಡಿತ್ತು. ಇದಕ್ಕೆ ಎನ್ಎಸ್​ಯುಐ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎನ್​ಎಸ್​ಯುಐ ಹೇಳಿತ್ತು. ಇದು ಎನ್​ಎಸ್​ಯುಐ ಮತ್ತು ಎಬಿವಿಪಿ ನಡುವೆ ಗುದ್ದಾಟಕ್ಕೆ ಕಾರಣವಾಗಿತ್ತು. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್